ಕ್ರೀಡೆ

ಮೈಸೂರು ವಾರಿಯರ್ಸ್‌ಗೆ ರೋಚಕ ಜಯ

ಪವನ್ ದೇಶಪಾಂಡೆ ಆಕರ್ಷಕ, ಸಮಯೋಚಿತ ಅರ್ಧ ಶತಕ

ಬೆಂಗಳೂರು: ಪವನ್ ದೇಶಪಾಂಡೆ ಅವರ ಸಮಯೋಚಿತ ಬ್ಯಾಟಿಂಗ್ (57) ಹಾಗೂ ವಿದ್ಯಾಧರ ಪಾಟೀಲ್ ಅವರ ಮಾರಕ ಬೌಲಿಂಗ್ (24ಕ್ಕೆ 4) ನೆರವಿನಿಂದ ಮೈಸೂರು ವಾರಿಯರ್ಸ್ ತಂಡ ಹುಬ್ಬಳ್ಳಿ ಟೈಗರ್ಸ್ ವಿರುದ್ಧ 2 ರನ್‌ಗಳ ರೋಚಕ ಜಯ ದಾಖಲಿಸಿದೆ.

146 ರನ್ ಜಯದ ಗುರಿ ಹೊತ್ತ ಹುಬ್ಬಳ್ಳಿ ಟೈಗರ್ಸ್ ಮೈಸೂರು ವಾರಿಯರ್ಸ್ ಬೌಲಿಂಗ್ ದಾಳಿಗೆ ಸಿಲುಕಿ 9 ವಿಕೆಟ್ ಕಳೆದುಕೊಂಡು 143ರನ್ ಗಳಿಸಿ ವೀರೋಚಿತ ಸೋಲನುಭವಿಸಿತು.

ನಾಯಕ ಅಭಿಮನ್ಯು ಮಿಥುನ್ (27), ಶರಣ್ ಗೌಡ (31) ಹಾಗೂ ಆನಂದ್ ದೊಡ್ಡಮನಿ (10) ಉತ್ತಮ ರೀತಿಯಲ್ಲಿ ಹೋರಾಟ ನೀಡಿದರೂ ಸೋಲಿನ ದವಡೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.

ಮೈಸೂರು ವಾರಿಯರ್ಸ್ ಪರ ವಿದ್ಯಾಧರ ಪಾಟೀಲ್ ೩, ಶ್ರೇಯಸ್ ಗೋಪಾಲ್ ಹಾಗೂ ಆದಿತ್ಯ ಗೋಯಲ್ ತಲಾ ೨ ವಿಕೆಟ್ ಗಳಿಸಿ ಹುಬ್ಬಳ್ಳಿ ಟೈಗರ್ಸ್ ಪಡೆಯನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು.

ಮೈಸೂರಿಗೆ ಆಸರೆಯಾದ ದೇಶಪಾಂಡೆ: ಕುಸಿದ ಮೈಸೂರಿಗೆ ಪವನ್ ದೇಶಪಾಂಡೆ ಮತ್ತೆ ಆಸರೆಯಾದರು. ವಾಸುಕಿ ಕೌಶಿಕ್ ದಾಳಿಗೆ ತತ್ತರಿಸಿದ ಮೈಸೂರು ವಾರಿಯರ್ಸ್ 7ವಿಕೆಟ್ ನಷ್ಟಕ್ಕೆ ಕೇವಲ 145ರನ್ ಗಳಿಸಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಹುಬ್ಬಳ್ಳಿ ಟೈಗರ್ಸ್ ಅದ್ಭುತ ಯಶಸ್ಸು ಕಂಡಿತು. ನಾಯಕ ಕರುಣ್ ನಾಯರ್ ಹಾಗೂ ನಿತಿನ್ ಬಿಲ್ಲೆ ಖಾತೆ ತೆರೆಯದೆ ಪೆವಿಲಿಯನ್ ಸೇರಿದ್ದು, ಮೈಸೂರಿನ ರನ್ ಗಳಿಕೆಯ ಮೇಲೆ ತೀವ್ರ ಹೊಡೆತ ಬಿದ್ದಿತು. ನಿಹಾಲ್ ಉಳ್ಳಾಲ್ ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿದರು. ಆಗ ತಂಡಕ್ಕೆ ಆಶ್ರಯ ನೀಡಿದ್ದು, ಪವನ್ ದೇಶಪಾಂಡೆ. 51 ಎಸೆತಗಳನ್ನೆದುರಿಸಿದ ದೇಶಪಾಂಡೆ 8 ಬೌಂಡರಿ ನೆರವಿನಿಂದ 57 ರನ್ ಗಳಿಸಿದರು. ಸತತ ನಾಲ್ಕು ಪಂದ್ಯಗಳಲ್ಲಿ ಅರ್ಧ ಶತಕ ಸಿಡಿಸಿದ ಕೀರ್ತಿ ಪವನ್ ದೇಶಪಾಂಡೆಗೆ ಸಲ್ಲುತ್ತದೆ. ಒಟ್ಟು 328ರನ್ ಗಳಿಸಿದ ಪವನ್ ದೇಶಪಾಂಡೆ ಈಗ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಶುಭಾಂಗ್ ಹೆಗ್ಡೆ (22) ಮತ್ತು ಶಿವರಾಜ್ (26) ಕೆಲ ಹೊತ್ತು ದೇಶಪಾಂಡೆ ಅವರಿಗೆ ಸಾಥ್ ನೀಡಿದರು. ಕೊನೆಯ ಕ್ಷಣದಲ್ಲಿ ಭರತ್ ಧುರಿ ಕೇವಲ 7 ಎಸೆತಗಳಲ್ಲಿ 2ಸಿಕ್ಸರ್ ಹಾಗೂ 1 ಬೌಂಡರಿ ನೆರವಿನಿಂದ ಮಿಂಚಿನ ವೇಗದಲ್ಲಿ 18 ರನ್ ಗಳಿಸಿ ತಂಡಕ್ಕೆ ನೆರವಾದರು.

ಸಂಕ್ಷಿಪ್ತ ಸ್ಕೋರ್:

ಮೈಸೂರು ವಾರಿಯರ್ಸ್: 20ಓವರ್‌ಗಳಲ್ಲಿ 8 ವಿಕೆಟ್‌ಗೆ 145 ರನ್ (ಪವನ್ ದೇಶಪಾಂಡೆ 57, ಶುಭಾಂಗ್ ಹೆಗ್ಡೆ 22, ಶಿವರಾಜ್ 26, ವಾಸುಕಿ ಕೌಶಿಕ್ 19ಕ್ಕೆ 3, ರೋಹನ್ ನವೀನ್ 37ಕ್ಕೆ 2)

ಹುಬ್ಬಳ್ಳಿ ಟೈಗರ್ಸ್: 20 ಓವರ್‌ಗಳಲ್ಲಿ 9 ವಿಕೆಟ್‌ಗೆ 143(ಸಿಸೋಡಿಯಾ 22, ಶ್ರೀನಿವಾಸ್ ಶರತ್ 21, ಎ.ಮಿಥುನ್ 27, ಶರಣ್ ಗೌಡ್ 31, ಆನಂದ ದೊಡ್ಡ ಮನಿ 10*, ವಿದ್ಯಾಧರ 24ಕ್ಕೆ 4, ಅದಿತ್ಯ ಗೋಯಲ್ 26ಕ್ಕೆ 2, ಶ್ರೇಯಸ್ ಗೋಪಾಲ್ 27ಕ್ಕೆ 2)

andolana

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

7 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

17 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

21 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

22 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

22 hours ago