ಕ್ರೀಡೆ

ಆರ್‌ಸಿಬಿ ತಂಡದ ಪ್ರಧಾನ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ತನ್ನ ಮುಖ್ಯ ಕೋಚ್ ಆಗಿ ಅನುಭವಿ ಆ್ಯಂಡಿ ಫ್ಲವರ್ ಅವರನ್ನು ನೇಮಿಸಿದ್ದು, ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಅವಧಿಯನ್ನು ಅಧಿಕೃತವಾಗಿ ಕೊನೆಗೊಳಿಸಿದೆ.

ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಹೆಸ್ಸನ್ ಹಾಗೂ ಮುಖ್ಯ ತರಬೇತುದಾರ ಬಂಗಾರ್ ಇಬ್ಬರ ಒಪ್ಪಂದಗಳು ಸೆಪ್ಟೆಂಬರ್ ನಲ್ಲಿ ನವೀಕರಣಕ್ಕೆ ಸಿದ್ಧವಾಗಿದ್ದವು. ಆದರೆ ಫ್ರಾಂಚೈಸಿ ಇಬ್ಬರನ್ನು ಮುಂದುವರಿಸದಿರಲು ನಿರ್ಧರಿಸಿತು.

RCB ಯ ಉಪಾಧ್ಯಕ್ಷ ಹಾಗೂ ಮುಖ್ಯಸ್ಥರಾದ ರಾಜೇಶ್ ಮೆನನ್ ಅವರು ಲಂಡನ್ ನಲ್ಲಿ ಫ್ಲವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ಐಪಿಎಲ್ 2024 ರಲ್ಲಿ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಎದುರು ನೋಡುತ್ತಿದ್ದೇನೆ ಎಂದು ಫ್ಲವರ್ ಹೇಳಿದ್ದಾರೆ.

“ಆರ್ ಸಿಬಿಗೆ ಸೇರುತ್ತಿರುವುದಕ್ಕೆ ನನಗೆ ನಿಜಕ್ಕೂ ಹೆಮ್ಮೆಯಾಗುತ್ತಿದೆ. ನಾನು ಗೌರವಿಸುವ ಇಬ್ಬರು ತರಬೇತುದಾರರಾದ ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಕೆಲಸವನ್ನು ನಾನು ಗುರುತಿಸುತ್ತೇನೆ ಹಾಗೂ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸವಾಲನ್ನು ನಾನು ಎದುರು ನೋಡುತ್ತಿದ್ದೇನೆ’’ ಎಂದು ಐಪಿಎಲ್ ನ ಹಿಂದಿನ ಎರಡು ಋತುಗಳಲ್ಲಿ ಲಕ್ನೋ ಸೂಪರರ್ ಜೈಂಟ್ಸ್ ಗೆ ತರಬೇತಿ ನೀಡಿದ್ದ ಫ್ಲವರ್ ಹೇಳಿದರು.

ಫ್ಲವರ್ ಐಪಿಎಲ್ ನಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ, ಇದಕ್ಕೂ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ನೊಂದಿಗೆ ಕೆಲಸ ಮಾಡಿದ್ದಾರೆ.

andolanait

Recent Posts

ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಬಿಜೆಪಿಯ ರಿತು ತಾವ್ಡೆ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…

60 mins ago

ಸಿಎಂ ಆಗುವ ಆಸೆ ಎಲ್ಲರಿಗೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…

1 hour ago

ಪಿರಿಯಾಪಟ್ಟಣ| ವಿದ್ಯುತ್‌ ಸ್ಪರ್ಶ: ಕಾಡಾನೆ ಸಾವು

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ…

2 hours ago

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: ಬಸವನಕಡ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…

3 hours ago

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

4 hours ago