ಕ್ರೀಡೆ

ಆರ್‌ಸಿಬಿ ತಂಡದ ಪ್ರಧಾನ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ತನ್ನ ಮುಖ್ಯ ಕೋಚ್ ಆಗಿ ಅನುಭವಿ ಆ್ಯಂಡಿ ಫ್ಲವರ್ ಅವರನ್ನು ನೇಮಿಸಿದ್ದು, ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಅವಧಿಯನ್ನು ಅಧಿಕೃತವಾಗಿ ಕೊನೆಗೊಳಿಸಿದೆ.

ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಹೆಸ್ಸನ್ ಹಾಗೂ ಮುಖ್ಯ ತರಬೇತುದಾರ ಬಂಗಾರ್ ಇಬ್ಬರ ಒಪ್ಪಂದಗಳು ಸೆಪ್ಟೆಂಬರ್ ನಲ್ಲಿ ನವೀಕರಣಕ್ಕೆ ಸಿದ್ಧವಾಗಿದ್ದವು. ಆದರೆ ಫ್ರಾಂಚೈಸಿ ಇಬ್ಬರನ್ನು ಮುಂದುವರಿಸದಿರಲು ನಿರ್ಧರಿಸಿತು.

RCB ಯ ಉಪಾಧ್ಯಕ್ಷ ಹಾಗೂ ಮುಖ್ಯಸ್ಥರಾದ ರಾಜೇಶ್ ಮೆನನ್ ಅವರು ಲಂಡನ್ ನಲ್ಲಿ ಫ್ಲವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ಐಪಿಎಲ್ 2024 ರಲ್ಲಿ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಎದುರು ನೋಡುತ್ತಿದ್ದೇನೆ ಎಂದು ಫ್ಲವರ್ ಹೇಳಿದ್ದಾರೆ.

“ಆರ್ ಸಿಬಿಗೆ ಸೇರುತ್ತಿರುವುದಕ್ಕೆ ನನಗೆ ನಿಜಕ್ಕೂ ಹೆಮ್ಮೆಯಾಗುತ್ತಿದೆ. ನಾನು ಗೌರವಿಸುವ ಇಬ್ಬರು ತರಬೇತುದಾರರಾದ ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಕೆಲಸವನ್ನು ನಾನು ಗುರುತಿಸುತ್ತೇನೆ ಹಾಗೂ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸವಾಲನ್ನು ನಾನು ಎದುರು ನೋಡುತ್ತಿದ್ದೇನೆ’’ ಎಂದು ಐಪಿಎಲ್ ನ ಹಿಂದಿನ ಎರಡು ಋತುಗಳಲ್ಲಿ ಲಕ್ನೋ ಸೂಪರರ್ ಜೈಂಟ್ಸ್ ಗೆ ತರಬೇತಿ ನೀಡಿದ್ದ ಫ್ಲವರ್ ಹೇಳಿದರು.

ಫ್ಲವರ್ ಐಪಿಎಲ್ ನಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ, ಇದಕ್ಕೂ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ನೊಂದಿಗೆ ಕೆಲಸ ಮಾಡಿದ್ದಾರೆ.

andolanait

Recent Posts

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

38 mins ago

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

1 hour ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

2 hours ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

2 hours ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

3 hours ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

3 hours ago