ಕ್ರೀಡೆ

ಆರ್‌ಸಿಬಿ ತಂಡದ ಪ್ರಧಾನ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ತನ್ನ ಮುಖ್ಯ ಕೋಚ್ ಆಗಿ ಅನುಭವಿ ಆ್ಯಂಡಿ ಫ್ಲವರ್ ಅವರನ್ನು ನೇಮಿಸಿದ್ದು, ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಅವಧಿಯನ್ನು ಅಧಿಕೃತವಾಗಿ ಕೊನೆಗೊಳಿಸಿದೆ.

ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಹೆಸ್ಸನ್ ಹಾಗೂ ಮುಖ್ಯ ತರಬೇತುದಾರ ಬಂಗಾರ್ ಇಬ್ಬರ ಒಪ್ಪಂದಗಳು ಸೆಪ್ಟೆಂಬರ್ ನಲ್ಲಿ ನವೀಕರಣಕ್ಕೆ ಸಿದ್ಧವಾಗಿದ್ದವು. ಆದರೆ ಫ್ರಾಂಚೈಸಿ ಇಬ್ಬರನ್ನು ಮುಂದುವರಿಸದಿರಲು ನಿರ್ಧರಿಸಿತು.

RCB ಯ ಉಪಾಧ್ಯಕ್ಷ ಹಾಗೂ ಮುಖ್ಯಸ್ಥರಾದ ರಾಜೇಶ್ ಮೆನನ್ ಅವರು ಲಂಡನ್ ನಲ್ಲಿ ಫ್ಲವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ಐಪಿಎಲ್ 2024 ರಲ್ಲಿ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಎದುರು ನೋಡುತ್ತಿದ್ದೇನೆ ಎಂದು ಫ್ಲವರ್ ಹೇಳಿದ್ದಾರೆ.

“ಆರ್ ಸಿಬಿಗೆ ಸೇರುತ್ತಿರುವುದಕ್ಕೆ ನನಗೆ ನಿಜಕ್ಕೂ ಹೆಮ್ಮೆಯಾಗುತ್ತಿದೆ. ನಾನು ಗೌರವಿಸುವ ಇಬ್ಬರು ತರಬೇತುದಾರರಾದ ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಕೆಲಸವನ್ನು ನಾನು ಗುರುತಿಸುತ್ತೇನೆ ಹಾಗೂ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸವಾಲನ್ನು ನಾನು ಎದುರು ನೋಡುತ್ತಿದ್ದೇನೆ’’ ಎಂದು ಐಪಿಎಲ್ ನ ಹಿಂದಿನ ಎರಡು ಋತುಗಳಲ್ಲಿ ಲಕ್ನೋ ಸೂಪರರ್ ಜೈಂಟ್ಸ್ ಗೆ ತರಬೇತಿ ನೀಡಿದ್ದ ಫ್ಲವರ್ ಹೇಳಿದರು.

ಫ್ಲವರ್ ಐಪಿಎಲ್ ನಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ, ಇದಕ್ಕೂ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ನೊಂದಿಗೆ ಕೆಲಸ ಮಾಡಿದ್ದಾರೆ.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

32 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

37 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

46 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago