ಕ್ರೀಡೆ

ಆರ್‌ಸಿಬಿ ತಂಡದ ಪ್ರಧಾನ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ತನ್ನ ಮುಖ್ಯ ಕೋಚ್ ಆಗಿ ಅನುಭವಿ ಆ್ಯಂಡಿ ಫ್ಲವರ್ ಅವರನ್ನು ನೇಮಿಸಿದ್ದು, ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಅವಧಿಯನ್ನು ಅಧಿಕೃತವಾಗಿ ಕೊನೆಗೊಳಿಸಿದೆ.

ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಹೆಸ್ಸನ್ ಹಾಗೂ ಮುಖ್ಯ ತರಬೇತುದಾರ ಬಂಗಾರ್ ಇಬ್ಬರ ಒಪ್ಪಂದಗಳು ಸೆಪ್ಟೆಂಬರ್ ನಲ್ಲಿ ನವೀಕರಣಕ್ಕೆ ಸಿದ್ಧವಾಗಿದ್ದವು. ಆದರೆ ಫ್ರಾಂಚೈಸಿ ಇಬ್ಬರನ್ನು ಮುಂದುವರಿಸದಿರಲು ನಿರ್ಧರಿಸಿತು.

RCB ಯ ಉಪಾಧ್ಯಕ್ಷ ಹಾಗೂ ಮುಖ್ಯಸ್ಥರಾದ ರಾಜೇಶ್ ಮೆನನ್ ಅವರು ಲಂಡನ್ ನಲ್ಲಿ ಫ್ಲವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ಐಪಿಎಲ್ 2024 ರಲ್ಲಿ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಎದುರು ನೋಡುತ್ತಿದ್ದೇನೆ ಎಂದು ಫ್ಲವರ್ ಹೇಳಿದ್ದಾರೆ.

“ಆರ್ ಸಿಬಿಗೆ ಸೇರುತ್ತಿರುವುದಕ್ಕೆ ನನಗೆ ನಿಜಕ್ಕೂ ಹೆಮ್ಮೆಯಾಗುತ್ತಿದೆ. ನಾನು ಗೌರವಿಸುವ ಇಬ್ಬರು ತರಬೇತುದಾರರಾದ ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಕೆಲಸವನ್ನು ನಾನು ಗುರುತಿಸುತ್ತೇನೆ ಹಾಗೂ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸವಾಲನ್ನು ನಾನು ಎದುರು ನೋಡುತ್ತಿದ್ದೇನೆ’’ ಎಂದು ಐಪಿಎಲ್ ನ ಹಿಂದಿನ ಎರಡು ಋತುಗಳಲ್ಲಿ ಲಕ್ನೋ ಸೂಪರರ್ ಜೈಂಟ್ಸ್ ಗೆ ತರಬೇತಿ ನೀಡಿದ್ದ ಫ್ಲವರ್ ಹೇಳಿದರು.

ಫ್ಲವರ್ ಐಪಿಎಲ್ ನಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ, ಇದಕ್ಕೂ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ನೊಂದಿಗೆ ಕೆಲಸ ಮಾಡಿದ್ದಾರೆ.

andolanait

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

8 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

8 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

8 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

8 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

8 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

8 hours ago