ಕ್ರೀಡೆ

ಆರ್‌ಸಿಬಿ ತಂಡದ ಪ್ರಧಾನ ಕೋಚ್ ಆಗಿ ಆ್ಯಂಡಿ ಫ್ಲವರ್ ನೇಮಕ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ತನ್ನ ಮುಖ್ಯ ಕೋಚ್ ಆಗಿ ಅನುಭವಿ ಆ್ಯಂಡಿ ಫ್ಲವರ್ ಅವರನ್ನು ನೇಮಿಸಿದ್ದು, ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಅವಧಿಯನ್ನು ಅಧಿಕೃತವಾಗಿ ಕೊನೆಗೊಳಿಸಿದೆ.

ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಹೆಸ್ಸನ್ ಹಾಗೂ ಮುಖ್ಯ ತರಬೇತುದಾರ ಬಂಗಾರ್ ಇಬ್ಬರ ಒಪ್ಪಂದಗಳು ಸೆಪ್ಟೆಂಬರ್ ನಲ್ಲಿ ನವೀಕರಣಕ್ಕೆ ಸಿದ್ಧವಾಗಿದ್ದವು. ಆದರೆ ಫ್ರಾಂಚೈಸಿ ಇಬ್ಬರನ್ನು ಮುಂದುವರಿಸದಿರಲು ನಿರ್ಧರಿಸಿತು.

RCB ಯ ಉಪಾಧ್ಯಕ್ಷ ಹಾಗೂ ಮುಖ್ಯಸ್ಥರಾದ ರಾಜೇಶ್ ಮೆನನ್ ಅವರು ಲಂಡನ್ ನಲ್ಲಿ ಫ್ಲವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.

ಐಪಿಎಲ್ 2024 ರಲ್ಲಿ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಎದುರು ನೋಡುತ್ತಿದ್ದೇನೆ ಎಂದು ಫ್ಲವರ್ ಹೇಳಿದ್ದಾರೆ.

“ಆರ್ ಸಿಬಿಗೆ ಸೇರುತ್ತಿರುವುದಕ್ಕೆ ನನಗೆ ನಿಜಕ್ಕೂ ಹೆಮ್ಮೆಯಾಗುತ್ತಿದೆ. ನಾನು ಗೌರವಿಸುವ ಇಬ್ಬರು ತರಬೇತುದಾರರಾದ ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಕೆಲಸವನ್ನು ನಾನು ಗುರುತಿಸುತ್ತೇನೆ ಹಾಗೂ ಆರ್ ಸಿಬಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸವಾಲನ್ನು ನಾನು ಎದುರು ನೋಡುತ್ತಿದ್ದೇನೆ’’ ಎಂದು ಐಪಿಎಲ್ ನ ಹಿಂದಿನ ಎರಡು ಋತುಗಳಲ್ಲಿ ಲಕ್ನೋ ಸೂಪರರ್ ಜೈಂಟ್ಸ್ ಗೆ ತರಬೇತಿ ನೀಡಿದ್ದ ಫ್ಲವರ್ ಹೇಳಿದರು.

ಫ್ಲವರ್ ಐಪಿಎಲ್ ನಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ, ಇದಕ್ಕೂ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ನೊಂದಿಗೆ ಕೆಲಸ ಮಾಡಿದ್ದಾರೆ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

9 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

10 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

11 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

16 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

23 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

23 hours ago