ಕ್ರೀಡೆ

ಕ್ರಿಕೆಟ್‌ ಇತಿಹಾಸದಲ್ಲಿ ʼಟೈಮ್ಡ್‌ ಔಟ್ʼ ಗೆ ಬಲಿಯಾದ ಮೊದಲ ಆಟಗಾರ ಆ್ಯಂಜೆಲೊ ಮ್ಯಾಥ್ಯೂಸ್‌

ನವದೆಹಲಿ : ಕ್ರಿಕೆಟಿನಲ್ಲಿ ಬ್ಯಾಟರ್ ಹಲವು ರೀತಿಗಳಲ್ಲಿ ಔಟ್‌ ಆಗುತ್ತಾರೆ, ಆದರೆ “ಟೈಮ್ಡ್‌ ಔಟ್”‌ ಕಾರಣ ಔಟ್‌ ಆಗುವುದು ಅಪರೂಪದಲ್ಲೇ ಅಪರೂಪ.

ಸೋಮವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ರಾಜಧಾನಿಯಲ್ಲಿ ನಡೆದ ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ, “ಟೈಮ್ಡ್‌ ಔಟ್”‌ ಆದ ಶ್ರೀಲಂಕಾದ ಆಟಗಾರ ಆ್ಯಂಜೆಲೊ ಮ್ಯಾಥ್ಯೂಸ್‌, ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಮೊದಲ ಬಾರಿ “ಟೈಮ್ಡ್‌ ಔಟ್”‌ ಆದ ಕ್ರಿಕೆಟಿಗ ಆಗಿದ್ದಾರೆ.

ಶ್ರೀಲಂಕಾ ತಂಡದ ನಂ. 6 ಬ್ಯಾಟರ್ ಆಗಿ ಕ್ರೀಸ್‌ನತ್ತ ನಡೆಯುತ್ತಿದ್ದ ಮ್ಯಾಥ್ಯೂಸ್‌ ಅವರಿಗೆ ಅವರ ಹೆಲ್ಮೆಟ್‌ನಲ್ಲಿನ ಸಮಸ್ಯೆಯಿಂದಾಗಿ ನಿಗದಿತ ಸಮಯಕ್ಕೆ ಸರಿಯಾಗಿ ಕ್ರೀಸ್‌ ತಲುಪಲು ಸಾಧ್ಯವಾಗಲಿಲ್ಲ.

ಈ ಕಾರಣ ಔಟ್‌ ಅಪೀಲನ್ನು ಬಾಂಗ್ಲಾದೇಶ ತಂಡ ಮಾಡಿತು. ನಂತರ ಅಂಪೈರ್‌ಗಳು ಮ್ಯಾಥ್ಯೂಸ್‌ ಮತ್ತು ಬಾಂಗ್ಲಾದೇಶ ತಂಡದ ಆಟಗಾರರ ಜೊತೆ ಸಮಾಲೋಚನೆ ನಡೆಸಿ ಕೊನೆಗೆ ಮ್ಯಾಥ್ಯೂಸ್‌ ಅವರನ್ನು ಔಟ್‌ ಎಂದು ಘೋಷಿಸಿದರು.

ಟೈಮ್ಡ್‌ ಔಟ್‌ ಎಂದರೇನು? : ಐಸಿಸಿ ಪ್ರಕಾರ ಈ ಕೆಳಗಿನ ಸನ್ನಿವೇಶಗಳಲ್ಲಿ ಬ್ಯಾಟರ್ ಒಬ್ಬರನ್ನು ಟೈಮ್ಡ್‌ ಔಟ್‌ ಎಂದು ಘೋಷಿಸಲಾಗುತ್ತದೆ.

ಒಂದು ವಿಕೆಟ್‌ ಪತನಗೊಂಡಾಗ ಅಥವಾ ಬ್ಯಾಟರ್ ಒಬ್ಬರು ಯಾವುದೋ ಕಾರಣಕ್ಕೆ ಮೈದಾನದಿಂದ ಹೊರಹೋಗಲು ನಿರ್ಧರಿಸಿದಲ್ಲಿ ಹಾಗಾದ ಮೂರು ನಿಮಿಷಗಳೊಳಗೆ ಹೊಸ ಬ್ಯಾಟ್ಸ್‌ಮೆನ್‌ ಕ್ರೀಸಿಗೆ ಬಂದು ಮುಂದಿನ ಬಾಲ್‌ ಎದುರಿಸಲು ಸಜ್ಜಾಗಬೇಕು. ಇಲ್ಲದೇ ಹೋದಲ್ಲಿ ಟೈಮ್ಡ್‌ ಔಟ್‌ ಘೋಷಿಸಲಾಗುತ್ತದೆ.

ಆದರೆ ನಿಯಮಗಳ ಪ್ರಕಾರ ಈ ರೀತಿ ಟೈಮ್ಡ್‌ ಔಟ್‌ ಆದಾಗ ಅದರ ಶ್ರೇಯ ಬೌಲರ್‌ಗೆ ಹೋಗುವುದಿಲ್ಲ.

ಆದರೆ ಐಸಿಸಿ ವಿಶ್ವ ಕಪ್‌ 2023 ನಿಯಮಗಳ ಪ್ರಕಾರ ಕ್ರೀಸಿಗೆ ಬರಲು ಬ್ಯಾಟರ್ ಗೆ ಇರುವ ಸಮಯಾವಕಾಶ 2 ನಿಮಿಷಗಳಾಗಿವೆ. ಒಬ್ಬ ಬ್ಯಾಟರ್ ಔಟ್‌ ಆದರೆ ಅಥವಾ ಆಟದಿಂದ ನಿವೃತ್ತರಾಗಿ ಹೊರಹೋದ ಎರಡು ನಿಮಿಷಗಳಲ್ಲಿ ಹೊಸ ಬ್ಯಾಟರ್ ಕ್ರೀಸಿಗೆ ಬಂದು ಬಾಲ್‌ ಎದುರಿಸಬೇಕು ಎಂದು ವಿಶ್ವಕಪ್‌ ನಿಯಮಗಳು ತಿಳಿಸುತ್ತವೆ.

andolanait

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

2 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

3 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

3 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

3 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

3 hours ago