ಕ್ರೀಡೆ

ಕ್ರಿಕೆಟ್‌ ಇತಿಹಾಸದಲ್ಲಿ ʼಟೈಮ್ಡ್‌ ಔಟ್ʼ ಗೆ ಬಲಿಯಾದ ಮೊದಲ ಆಟಗಾರ ಆ್ಯಂಜೆಲೊ ಮ್ಯಾಥ್ಯೂಸ್‌

ನವದೆಹಲಿ : ಕ್ರಿಕೆಟಿನಲ್ಲಿ ಬ್ಯಾಟರ್ ಹಲವು ರೀತಿಗಳಲ್ಲಿ ಔಟ್‌ ಆಗುತ್ತಾರೆ, ಆದರೆ “ಟೈಮ್ಡ್‌ ಔಟ್”‌ ಕಾರಣ ಔಟ್‌ ಆಗುವುದು ಅಪರೂಪದಲ್ಲೇ ಅಪರೂಪ.

ಸೋಮವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ರಾಜಧಾನಿಯಲ್ಲಿ ನಡೆದ ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ, “ಟೈಮ್ಡ್‌ ಔಟ್”‌ ಆದ ಶ್ರೀಲಂಕಾದ ಆಟಗಾರ ಆ್ಯಂಜೆಲೊ ಮ್ಯಾಥ್ಯೂಸ್‌, ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಮೊದಲ ಬಾರಿ “ಟೈಮ್ಡ್‌ ಔಟ್”‌ ಆದ ಕ್ರಿಕೆಟಿಗ ಆಗಿದ್ದಾರೆ.

ಶ್ರೀಲಂಕಾ ತಂಡದ ನಂ. 6 ಬ್ಯಾಟರ್ ಆಗಿ ಕ್ರೀಸ್‌ನತ್ತ ನಡೆಯುತ್ತಿದ್ದ ಮ್ಯಾಥ್ಯೂಸ್‌ ಅವರಿಗೆ ಅವರ ಹೆಲ್ಮೆಟ್‌ನಲ್ಲಿನ ಸಮಸ್ಯೆಯಿಂದಾಗಿ ನಿಗದಿತ ಸಮಯಕ್ಕೆ ಸರಿಯಾಗಿ ಕ್ರೀಸ್‌ ತಲುಪಲು ಸಾಧ್ಯವಾಗಲಿಲ್ಲ.

ಈ ಕಾರಣ ಔಟ್‌ ಅಪೀಲನ್ನು ಬಾಂಗ್ಲಾದೇಶ ತಂಡ ಮಾಡಿತು. ನಂತರ ಅಂಪೈರ್‌ಗಳು ಮ್ಯಾಥ್ಯೂಸ್‌ ಮತ್ತು ಬಾಂಗ್ಲಾದೇಶ ತಂಡದ ಆಟಗಾರರ ಜೊತೆ ಸಮಾಲೋಚನೆ ನಡೆಸಿ ಕೊನೆಗೆ ಮ್ಯಾಥ್ಯೂಸ್‌ ಅವರನ್ನು ಔಟ್‌ ಎಂದು ಘೋಷಿಸಿದರು.

ಟೈಮ್ಡ್‌ ಔಟ್‌ ಎಂದರೇನು? : ಐಸಿಸಿ ಪ್ರಕಾರ ಈ ಕೆಳಗಿನ ಸನ್ನಿವೇಶಗಳಲ್ಲಿ ಬ್ಯಾಟರ್ ಒಬ್ಬರನ್ನು ಟೈಮ್ಡ್‌ ಔಟ್‌ ಎಂದು ಘೋಷಿಸಲಾಗುತ್ತದೆ.

ಒಂದು ವಿಕೆಟ್‌ ಪತನಗೊಂಡಾಗ ಅಥವಾ ಬ್ಯಾಟರ್ ಒಬ್ಬರು ಯಾವುದೋ ಕಾರಣಕ್ಕೆ ಮೈದಾನದಿಂದ ಹೊರಹೋಗಲು ನಿರ್ಧರಿಸಿದಲ್ಲಿ ಹಾಗಾದ ಮೂರು ನಿಮಿಷಗಳೊಳಗೆ ಹೊಸ ಬ್ಯಾಟ್ಸ್‌ಮೆನ್‌ ಕ್ರೀಸಿಗೆ ಬಂದು ಮುಂದಿನ ಬಾಲ್‌ ಎದುರಿಸಲು ಸಜ್ಜಾಗಬೇಕು. ಇಲ್ಲದೇ ಹೋದಲ್ಲಿ ಟೈಮ್ಡ್‌ ಔಟ್‌ ಘೋಷಿಸಲಾಗುತ್ತದೆ.

ಆದರೆ ನಿಯಮಗಳ ಪ್ರಕಾರ ಈ ರೀತಿ ಟೈಮ್ಡ್‌ ಔಟ್‌ ಆದಾಗ ಅದರ ಶ್ರೇಯ ಬೌಲರ್‌ಗೆ ಹೋಗುವುದಿಲ್ಲ.

ಆದರೆ ಐಸಿಸಿ ವಿಶ್ವ ಕಪ್‌ 2023 ನಿಯಮಗಳ ಪ್ರಕಾರ ಕ್ರೀಸಿಗೆ ಬರಲು ಬ್ಯಾಟರ್ ಗೆ ಇರುವ ಸಮಯಾವಕಾಶ 2 ನಿಮಿಷಗಳಾಗಿವೆ. ಒಬ್ಬ ಬ್ಯಾಟರ್ ಔಟ್‌ ಆದರೆ ಅಥವಾ ಆಟದಿಂದ ನಿವೃತ್ತರಾಗಿ ಹೊರಹೋದ ಎರಡು ನಿಮಿಷಗಳಲ್ಲಿ ಹೊಸ ಬ್ಯಾಟರ್ ಕ್ರೀಸಿಗೆ ಬಂದು ಬಾಲ್‌ ಎದುರಿಸಬೇಕು ಎಂದು ವಿಶ್ವಕಪ್‌ ನಿಯಮಗಳು ತಿಳಿಸುತ್ತವೆ.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

1 hour ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago