ಕ್ರೀಡೆ

ಕ್ರಿಕೆಟ್‌ ಇತಿಹಾಸದಲ್ಲಿ ʼಟೈಮ್ಡ್‌ ಔಟ್ʼ ಗೆ ಬಲಿಯಾದ ಮೊದಲ ಆಟಗಾರ ಆ್ಯಂಜೆಲೊ ಮ್ಯಾಥ್ಯೂಸ್‌

ನವದೆಹಲಿ : ಕ್ರಿಕೆಟಿನಲ್ಲಿ ಬ್ಯಾಟರ್ ಹಲವು ರೀತಿಗಳಲ್ಲಿ ಔಟ್‌ ಆಗುತ್ತಾರೆ, ಆದರೆ “ಟೈಮ್ಡ್‌ ಔಟ್”‌ ಕಾರಣ ಔಟ್‌ ಆಗುವುದು ಅಪರೂಪದಲ್ಲೇ ಅಪರೂಪ.

ಸೋಮವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ರಾಜಧಾನಿಯಲ್ಲಿ ನಡೆದ ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ, “ಟೈಮ್ಡ್‌ ಔಟ್”‌ ಆದ ಶ್ರೀಲಂಕಾದ ಆಟಗಾರ ಆ್ಯಂಜೆಲೊ ಮ್ಯಾಥ್ಯೂಸ್‌, ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಮೊದಲ ಬಾರಿ “ಟೈಮ್ಡ್‌ ಔಟ್”‌ ಆದ ಕ್ರಿಕೆಟಿಗ ಆಗಿದ್ದಾರೆ.

ಶ್ರೀಲಂಕಾ ತಂಡದ ನಂ. 6 ಬ್ಯಾಟರ್ ಆಗಿ ಕ್ರೀಸ್‌ನತ್ತ ನಡೆಯುತ್ತಿದ್ದ ಮ್ಯಾಥ್ಯೂಸ್‌ ಅವರಿಗೆ ಅವರ ಹೆಲ್ಮೆಟ್‌ನಲ್ಲಿನ ಸಮಸ್ಯೆಯಿಂದಾಗಿ ನಿಗದಿತ ಸಮಯಕ್ಕೆ ಸರಿಯಾಗಿ ಕ್ರೀಸ್‌ ತಲುಪಲು ಸಾಧ್ಯವಾಗಲಿಲ್ಲ.

ಈ ಕಾರಣ ಔಟ್‌ ಅಪೀಲನ್ನು ಬಾಂಗ್ಲಾದೇಶ ತಂಡ ಮಾಡಿತು. ನಂತರ ಅಂಪೈರ್‌ಗಳು ಮ್ಯಾಥ್ಯೂಸ್‌ ಮತ್ತು ಬಾಂಗ್ಲಾದೇಶ ತಂಡದ ಆಟಗಾರರ ಜೊತೆ ಸಮಾಲೋಚನೆ ನಡೆಸಿ ಕೊನೆಗೆ ಮ್ಯಾಥ್ಯೂಸ್‌ ಅವರನ್ನು ಔಟ್‌ ಎಂದು ಘೋಷಿಸಿದರು.

ಟೈಮ್ಡ್‌ ಔಟ್‌ ಎಂದರೇನು? : ಐಸಿಸಿ ಪ್ರಕಾರ ಈ ಕೆಳಗಿನ ಸನ್ನಿವೇಶಗಳಲ್ಲಿ ಬ್ಯಾಟರ್ ಒಬ್ಬರನ್ನು ಟೈಮ್ಡ್‌ ಔಟ್‌ ಎಂದು ಘೋಷಿಸಲಾಗುತ್ತದೆ.

ಒಂದು ವಿಕೆಟ್‌ ಪತನಗೊಂಡಾಗ ಅಥವಾ ಬ್ಯಾಟರ್ ಒಬ್ಬರು ಯಾವುದೋ ಕಾರಣಕ್ಕೆ ಮೈದಾನದಿಂದ ಹೊರಹೋಗಲು ನಿರ್ಧರಿಸಿದಲ್ಲಿ ಹಾಗಾದ ಮೂರು ನಿಮಿಷಗಳೊಳಗೆ ಹೊಸ ಬ್ಯಾಟ್ಸ್‌ಮೆನ್‌ ಕ್ರೀಸಿಗೆ ಬಂದು ಮುಂದಿನ ಬಾಲ್‌ ಎದುರಿಸಲು ಸಜ್ಜಾಗಬೇಕು. ಇಲ್ಲದೇ ಹೋದಲ್ಲಿ ಟೈಮ್ಡ್‌ ಔಟ್‌ ಘೋಷಿಸಲಾಗುತ್ತದೆ.

ಆದರೆ ನಿಯಮಗಳ ಪ್ರಕಾರ ಈ ರೀತಿ ಟೈಮ್ಡ್‌ ಔಟ್‌ ಆದಾಗ ಅದರ ಶ್ರೇಯ ಬೌಲರ್‌ಗೆ ಹೋಗುವುದಿಲ್ಲ.

ಆದರೆ ಐಸಿಸಿ ವಿಶ್ವ ಕಪ್‌ 2023 ನಿಯಮಗಳ ಪ್ರಕಾರ ಕ್ರೀಸಿಗೆ ಬರಲು ಬ್ಯಾಟರ್ ಗೆ ಇರುವ ಸಮಯಾವಕಾಶ 2 ನಿಮಿಷಗಳಾಗಿವೆ. ಒಬ್ಬ ಬ್ಯಾಟರ್ ಔಟ್‌ ಆದರೆ ಅಥವಾ ಆಟದಿಂದ ನಿವೃತ್ತರಾಗಿ ಹೊರಹೋದ ಎರಡು ನಿಮಿಷಗಳಲ್ಲಿ ಹೊಸ ಬ್ಯಾಟರ್ ಕ್ರೀಸಿಗೆ ಬಂದು ಬಾಲ್‌ ಎದುರಿಸಬೇಕು ಎಂದು ವಿಶ್ವಕಪ್‌ ನಿಯಮಗಳು ತಿಳಿಸುತ್ತವೆ.

andolanait

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

3 hours ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

3 hours ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

3 hours ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

3 hours ago