ಕ್ರೀಡೆ

ಕ್ರಿಕೆಟ್‌ ಇತಿಹಾಸದಲ್ಲಿ ʼಟೈಮ್ಡ್‌ ಔಟ್ʼ ಗೆ ಬಲಿಯಾದ ಮೊದಲ ಆಟಗಾರ ಆ್ಯಂಜೆಲೊ ಮ್ಯಾಥ್ಯೂಸ್‌

ನವದೆಹಲಿ : ಕ್ರಿಕೆಟಿನಲ್ಲಿ ಬ್ಯಾಟರ್ ಹಲವು ರೀತಿಗಳಲ್ಲಿ ಔಟ್‌ ಆಗುತ್ತಾರೆ, ಆದರೆ “ಟೈಮ್ಡ್‌ ಔಟ್”‌ ಕಾರಣ ಔಟ್‌ ಆಗುವುದು ಅಪರೂಪದಲ್ಲೇ ಅಪರೂಪ.

ಸೋಮವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ರಾಜಧಾನಿಯಲ್ಲಿ ನಡೆದ ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ, “ಟೈಮ್ಡ್‌ ಔಟ್”‌ ಆದ ಶ್ರೀಲಂಕಾದ ಆಟಗಾರ ಆ್ಯಂಜೆಲೊ ಮ್ಯಾಥ್ಯೂಸ್‌, ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಮೊದಲ ಬಾರಿ “ಟೈಮ್ಡ್‌ ಔಟ್”‌ ಆದ ಕ್ರಿಕೆಟಿಗ ಆಗಿದ್ದಾರೆ.

ಶ್ರೀಲಂಕಾ ತಂಡದ ನಂ. 6 ಬ್ಯಾಟರ್ ಆಗಿ ಕ್ರೀಸ್‌ನತ್ತ ನಡೆಯುತ್ತಿದ್ದ ಮ್ಯಾಥ್ಯೂಸ್‌ ಅವರಿಗೆ ಅವರ ಹೆಲ್ಮೆಟ್‌ನಲ್ಲಿನ ಸಮಸ್ಯೆಯಿಂದಾಗಿ ನಿಗದಿತ ಸಮಯಕ್ಕೆ ಸರಿಯಾಗಿ ಕ್ರೀಸ್‌ ತಲುಪಲು ಸಾಧ್ಯವಾಗಲಿಲ್ಲ.

ಈ ಕಾರಣ ಔಟ್‌ ಅಪೀಲನ್ನು ಬಾಂಗ್ಲಾದೇಶ ತಂಡ ಮಾಡಿತು. ನಂತರ ಅಂಪೈರ್‌ಗಳು ಮ್ಯಾಥ್ಯೂಸ್‌ ಮತ್ತು ಬಾಂಗ್ಲಾದೇಶ ತಂಡದ ಆಟಗಾರರ ಜೊತೆ ಸಮಾಲೋಚನೆ ನಡೆಸಿ ಕೊನೆಗೆ ಮ್ಯಾಥ್ಯೂಸ್‌ ಅವರನ್ನು ಔಟ್‌ ಎಂದು ಘೋಷಿಸಿದರು.

ಟೈಮ್ಡ್‌ ಔಟ್‌ ಎಂದರೇನು? : ಐಸಿಸಿ ಪ್ರಕಾರ ಈ ಕೆಳಗಿನ ಸನ್ನಿವೇಶಗಳಲ್ಲಿ ಬ್ಯಾಟರ್ ಒಬ್ಬರನ್ನು ಟೈಮ್ಡ್‌ ಔಟ್‌ ಎಂದು ಘೋಷಿಸಲಾಗುತ್ತದೆ.

ಒಂದು ವಿಕೆಟ್‌ ಪತನಗೊಂಡಾಗ ಅಥವಾ ಬ್ಯಾಟರ್ ಒಬ್ಬರು ಯಾವುದೋ ಕಾರಣಕ್ಕೆ ಮೈದಾನದಿಂದ ಹೊರಹೋಗಲು ನಿರ್ಧರಿಸಿದಲ್ಲಿ ಹಾಗಾದ ಮೂರು ನಿಮಿಷಗಳೊಳಗೆ ಹೊಸ ಬ್ಯಾಟ್ಸ್‌ಮೆನ್‌ ಕ್ರೀಸಿಗೆ ಬಂದು ಮುಂದಿನ ಬಾಲ್‌ ಎದುರಿಸಲು ಸಜ್ಜಾಗಬೇಕು. ಇಲ್ಲದೇ ಹೋದಲ್ಲಿ ಟೈಮ್ಡ್‌ ಔಟ್‌ ಘೋಷಿಸಲಾಗುತ್ತದೆ.

ಆದರೆ ನಿಯಮಗಳ ಪ್ರಕಾರ ಈ ರೀತಿ ಟೈಮ್ಡ್‌ ಔಟ್‌ ಆದಾಗ ಅದರ ಶ್ರೇಯ ಬೌಲರ್‌ಗೆ ಹೋಗುವುದಿಲ್ಲ.

ಆದರೆ ಐಸಿಸಿ ವಿಶ್ವ ಕಪ್‌ 2023 ನಿಯಮಗಳ ಪ್ರಕಾರ ಕ್ರೀಸಿಗೆ ಬರಲು ಬ್ಯಾಟರ್ ಗೆ ಇರುವ ಸಮಯಾವಕಾಶ 2 ನಿಮಿಷಗಳಾಗಿವೆ. ಒಬ್ಬ ಬ್ಯಾಟರ್ ಔಟ್‌ ಆದರೆ ಅಥವಾ ಆಟದಿಂದ ನಿವೃತ್ತರಾಗಿ ಹೊರಹೋದ ಎರಡು ನಿಮಿಷಗಳಲ್ಲಿ ಹೊಸ ಬ್ಯಾಟರ್ ಕ್ರೀಸಿಗೆ ಬಂದು ಬಾಲ್‌ ಎದುರಿಸಬೇಕು ಎಂದು ವಿಶ್ವಕಪ್‌ ನಿಯಮಗಳು ತಿಳಿಸುತ್ತವೆ.

andolanait

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

38 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago