ಕ್ರೀಡೆ

ಡೆವಿಡ್‌ ವಾರ್ನರ್‌ ಮುಡಿಗೆ ಮತ್ತೊಂದು ದಾಖಲೆ

ಮೆಲ್ಬೋರ್ನ್ : ಇಲ್ಲಿ ನಡೆಯುತ್ತಿರುವ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ಎಡಗೈ ದಾಂಡಿಗ ಡೆವಿಡ್‌ ವಾರ್ನರ್‌ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಪಾಕ್‌ ವಿರುದ್ಧದ ಪಂದ್ಯದಲ್ಲಿ 38 ರನ್‌ ಗಳಿಸುವ ಮೂಲಕ ಆಸ್ಟ್ರೇಲಿಯಾ ಪರವಾಗಿ ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಾರ್ನರ್‌ ಎರಡನೇ ಸ್ಥಾನ ಪಡೆದು ದಾಖಲೆ ಬರೆದಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್‌ ಮಾಡಿದ ಆಸೀಸ್‌ ತಂಡಕ್ಕೆ ಆರಂಭಿಕರಾದ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಭರ್ಜರಿ ಒಪನಿಂಗ್‌ ಒದಗಿಸಿದರು. ಮೊದಲ ವಿಕೆಟ್​ಗೆ 90 ರನ್​ಗಳ ಜೊತೆಯಾಟವಾಡಿದ ಬಳಿಕ ಡೇವಿಡ್ ವಾರ್ನರ್ (38) ಸಲ್ಮಾನ್ ಅಲಿ ಅಘಾ ಎಸೆತದಲ್ಲಿ ಸ್ಲಿಪ್​ನಲ್ಲಿ ಕ್ಯಾಚ್ ನೀಡಿದರು. ಈ 38 ರನ್​ಗಳ ಇನಿಂಗ್ಸ್​ನೊಂದಿಗೆ ವಾರ್ನರ್ ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಆಸೀಸ್‌ ಮಾಜಿ ನಾಯಕ ಸ್ಟೀವ್ ವಾ 548 ಇನಿಂಗ್ಸ್​ಗಳಿಂದ 18496 ರನ್​ ಕಲೆಹಾಕಿದ್ದರು. ಇದೀಗ ಈ ದಾಖಲೆಯನ್ನು ಮುರಿದಿರುವ ಡೇವಿಡ್ ವಾರ್ನರ್ 460 ಇನಿಂಗ್ಸ್‌ನಲ್ಲಿ ಇದುವರೆಗೆ 18502 ರನ್ ಕಲೆಹಾಕಿದ್ದಾರೆ. ಆ ಮೂಲಕ ಆಸೀಸ್ ಪರ ಅತ್ಯಧಿಕ ರನ್​ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಪಂಟರ್ ಖ್ಯಾತಿಯ ರಿಕ್ಕಿ ಪಾಟಿಂಗ್ ಅಗ್ರಸ್ಥಾನದಲ್ಲಿದ್ದು, ಅವರು 667 ಇನಿಂಗ್ಸ್​ಗಳಲ್ಲಿ ಒಟ್ಟು 27368 ರನ್​ ಕಲೆಹಾಕಿದ್ದಾರೆ. ಇದು ಆಸೀಸ್‌ ಪರ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಮೊದಲಿಗರಾಗಿದ್ದಾರೆ.

ಜನವರಿ 3 ರಿಂದ ಆರಂಭವಾಗಲಿರುವ ಪಾಕಿಸ್ತಾನ್ ವಿರುದ್ಧದ 3ನೇ ಟೆಸ್ಟ್‌ ಪಂದ್ಯದ ಮೂಲಕ ವಾರ್ನರ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

ಆಸ್ಟ್ರೇಲಿಯಾ ಇನ್ನಿಂಗ್ಸ್‌:

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆದಿದೆ. ಡೇವಿಡ್ ವಾರ್ನರ್ (38) ಹಾಗೂ ಉಸ್ಮಾನ್ ಖ್ವಾಜಾ (42) ಗಳಿಸಿ ನಿರ್ಗಮಿಸಿದರೆ, ಕ್ರೀಸ್​ನಲ್ಲಿ ಮಾರ್ನಸ್ ಲಾಬುಶೇನ್ (22*) ಹಾಗೂ ಸ್ಟೀವ್ ಸ್ಮಿತ್ (19*) ಬ್ಯಾಟಿಂಗ್ ಮಾಡುತ್ತಿದ್ದಾರೆ. ಆಸೀಸ್‌ 54.3 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 141ರನ್‌ ಕಲೆಹಾಕಿ ಬ್ಯಾಟಿಂಗ್‌ ಮಾಡುತ್ತಿದೆ.

andolanait

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

2 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

3 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

3 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

3 hours ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

3 hours ago