ಕ್ರೀಡೆ

ಕೊಹ್ಲಿ, ರೋಹಿತ್‌ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾಗೆ ಮತ್ತೊಂದು ಶಾಕ್‌…

ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್‌ ಗೆದ್ದ ಖುಷಿಯಲ್ಲಿದೆ. ಈ ಬೆನ್ನಲ್ಲೇ ಟಿ20 ವಿಶ್ವಕಪ್‌ಗೆ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಇವರ ಹಾದಿ ಹಿಡಿದ ರವೀಂದ್ರ ಜಡೇಜಾ ಕೂಡ ಅಂತರಾಷ್ಟ್ರೀಯಾ ಟಿ20 ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ.

ರವೀಂದ್ರ ಜಡೇಜಾ ವಿಶ್ವಕಪ್‌ ಟ್ರೋಫಿಯೊಂದಿಗೆ ತಮ್ಮ ಚಿತ್ರವನ್ನ ಸಾಮಾಜಿಕ ಜಾಲಾತಾಣದಲ್ಲಿ ಪೊಸ್ಟ್‌ ಮಾಡಿ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿದಾಯದ ಕುರಿತು ಪೋಸ್ಟ್‌ ಮಾಡಿರುವ ರವೀಂದ್ರ ಜಡೇಜಾ, ಧನ್ಯವಾದ ತುಂಬಿದ ಹೃದಯದಿಂದ ನಾನು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ನಾನು ಯಾವಾಗಲೂ ನನ್ನ ದೇಶಕ್ಕಾಗಿ ಅತ್ಯತ್ತಮವಾದದ್ದನ್ನು ನೀಡಿದ್ದೇನೆ. ಇತರ ಮಾದರಿ ಕ್ರಿಕೆಟ್‌ಗಳಲ್ಲಿ ನಾನು ಮಂದುವರೆಯಲಿದ್ದೇನೆ. ಟಿ20 ವಿಶ್ವಕಪ್‌ ಗೆಲ್ಲುವುದು ನನ್ನ ಕನಸು, ಆ ಕನಸು ನನಸಾಯಿತು. ಇದು ನನ್ನ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಮೈಲಿಗಲ್ಲು. ನೆನಪುಗಳು, ಹರ್ಷೋದ್ಗಾರಗಳು ಮತ್ತು ಅಚಲವಾದ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

ಟೀಂ ಇಂಡಿಯಾ ತಂಡದ ದಿಗ್ಗಜ ನಾಯಕರೇ ವಿದಾಯ ಹೇಳಿರುವುದು ಭಾರತ ತಂಡದ ಅಭಿಮಾನಿಗಳಿಗೆ ಬೇಸರ ತರಿಸಿದೆ. ಆಲ್‌ ರೌಂಡರ್‌ ರವೀಂದ್ರ ಜಡೇಜ ಅವರು ಎಂ ಎಸ್‌ ಧೋನಿ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪ್ರವೇಶ ಪಡೆದಿದ್ದರು. ಬಳಿಕ ಅವರು ಕ್ರಿಕೆಟ್‌ ಅಂಗಳದಲ್ಲಿ ಬಹು ದೂರ ಸಾಗಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

2 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

2 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

5 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

6 hours ago