ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿದೆ. ಈ ಬೆನ್ನಲ್ಲೇ ಟಿ20 ವಿಶ್ವಕಪ್ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಇವರ ಹಾದಿ ಹಿಡಿದ ರವೀಂದ್ರ ಜಡೇಜಾ ಕೂಡ ಅಂತರಾಷ್ಟ್ರೀಯಾ ಟಿ20 ಕ್ರಿಕೆಟ್ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ.
ರವೀಂದ್ರ ಜಡೇಜಾ ವಿಶ್ವಕಪ್ ಟ್ರೋಫಿಯೊಂದಿಗೆ ತಮ್ಮ ಚಿತ್ರವನ್ನ ಸಾಮಾಜಿಕ ಜಾಲಾತಾಣದಲ್ಲಿ ಪೊಸ್ಟ್ ಮಾಡಿ ನಿವೃತ್ತಿ ಘೋಷಿಸಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ನಲ್ಲಿ ವಿದಾಯದ ಕುರಿತು ಪೋಸ್ಟ್ ಮಾಡಿರುವ ರವೀಂದ್ರ ಜಡೇಜಾ, ಧನ್ಯವಾದ ತುಂಬಿದ ಹೃದಯದಿಂದ ನಾನು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ನಾನು ಯಾವಾಗಲೂ ನನ್ನ ದೇಶಕ್ಕಾಗಿ ಅತ್ಯತ್ತಮವಾದದ್ದನ್ನು ನೀಡಿದ್ದೇನೆ. ಇತರ ಮಾದರಿ ಕ್ರಿಕೆಟ್ಗಳಲ್ಲಿ ನಾನು ಮಂದುವರೆಯಲಿದ್ದೇನೆ. ಟಿ20 ವಿಶ್ವಕಪ್ ಗೆಲ್ಲುವುದು ನನ್ನ ಕನಸು, ಆ ಕನಸು ನನಸಾಯಿತು. ಇದು ನನ್ನ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಮೈಲಿಗಲ್ಲು. ನೆನಪುಗಳು, ಹರ್ಷೋದ್ಗಾರಗಳು ಮತ್ತು ಅಚಲವಾದ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಟೀಂ ಇಂಡಿಯಾ ತಂಡದ ದಿಗ್ಗಜ ನಾಯಕರೇ ವಿದಾಯ ಹೇಳಿರುವುದು ಭಾರತ ತಂಡದ ಅಭಿಮಾನಿಗಳಿಗೆ ಬೇಸರ ತರಿಸಿದೆ. ಆಲ್ ರೌಂಡರ್ ರವೀಂದ್ರ ಜಡೇಜ ಅವರು ಎಂ ಎಸ್ ಧೋನಿ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪ್ರವೇಶ ಪಡೆದಿದ್ದರು. ಬಳಿಕ ಅವರು ಕ್ರಿಕೆಟ್ ಅಂಗಳದಲ್ಲಿ ಬಹು ದೂರ ಸಾಗಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…