ಕ್ರೀಡೆ

ಕೊಹ್ಲಿ, ರೋಹಿತ್‌ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾಗೆ ಮತ್ತೊಂದು ಶಾಕ್‌…

ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್‌ ಗೆದ್ದ ಖುಷಿಯಲ್ಲಿದೆ. ಈ ಬೆನ್ನಲ್ಲೇ ಟಿ20 ವಿಶ್ವಕಪ್‌ಗೆ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಇವರ ಹಾದಿ ಹಿಡಿದ ರವೀಂದ್ರ ಜಡೇಜಾ ಕೂಡ ಅಂತರಾಷ್ಟ್ರೀಯಾ ಟಿ20 ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ.

ರವೀಂದ್ರ ಜಡೇಜಾ ವಿಶ್ವಕಪ್‌ ಟ್ರೋಫಿಯೊಂದಿಗೆ ತಮ್ಮ ಚಿತ್ರವನ್ನ ಸಾಮಾಜಿಕ ಜಾಲಾತಾಣದಲ್ಲಿ ಪೊಸ್ಟ್‌ ಮಾಡಿ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿದಾಯದ ಕುರಿತು ಪೋಸ್ಟ್‌ ಮಾಡಿರುವ ರವೀಂದ್ರ ಜಡೇಜಾ, ಧನ್ಯವಾದ ತುಂಬಿದ ಹೃದಯದಿಂದ ನಾನು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ನಾನು ಯಾವಾಗಲೂ ನನ್ನ ದೇಶಕ್ಕಾಗಿ ಅತ್ಯತ್ತಮವಾದದ್ದನ್ನು ನೀಡಿದ್ದೇನೆ. ಇತರ ಮಾದರಿ ಕ್ರಿಕೆಟ್‌ಗಳಲ್ಲಿ ನಾನು ಮಂದುವರೆಯಲಿದ್ದೇನೆ. ಟಿ20 ವಿಶ್ವಕಪ್‌ ಗೆಲ್ಲುವುದು ನನ್ನ ಕನಸು, ಆ ಕನಸು ನನಸಾಯಿತು. ಇದು ನನ್ನ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಮೈಲಿಗಲ್ಲು. ನೆನಪುಗಳು, ಹರ್ಷೋದ್ಗಾರಗಳು ಮತ್ತು ಅಚಲವಾದ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

ಟೀಂ ಇಂಡಿಯಾ ತಂಡದ ದಿಗ್ಗಜ ನಾಯಕರೇ ವಿದಾಯ ಹೇಳಿರುವುದು ಭಾರತ ತಂಡದ ಅಭಿಮಾನಿಗಳಿಗೆ ಬೇಸರ ತರಿಸಿದೆ. ಆಲ್‌ ರೌಂಡರ್‌ ರವೀಂದ್ರ ಜಡೇಜ ಅವರು ಎಂ ಎಸ್‌ ಧೋನಿ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪ್ರವೇಶ ಪಡೆದಿದ್ದರು. ಬಳಿಕ ಅವರು ಕ್ರಿಕೆಟ್‌ ಅಂಗಳದಲ್ಲಿ ಬಹು ದೂರ ಸಾಗಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago