ಪ್ಯಾರಿಸ್: ವಿನೇಶ್ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಅಂತಿಮ್ ಪಂಘಲ್ರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ.
ಒಲಿಂಪಿಕ್ಸ್ನಲ್ಲಿ ಅನರ್ಹಗೊಂಡು ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ತಟ್ಟಿದ್ದು, ಭಾರತೀಯ ಕುಸ್ತಿಪಟುವನ್ನು ಪ್ಯಾರಿಸ್ನಿಂದ ಗಡಿಪಾರು ಮಾಡಲು ನಿರ್ಧರಿಸಲಾಗಿದೆ.
ಭಾರತೀಯ ಕುಸ್ತಿಪಟು ಅಂತಿಮ್ ಪಂಘಲ್ ಅವರು ತಮ್ಮ ಮಾನ್ಯತಾ ಗುರುತಿನ ಚೀಟಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಹಾಗಾಗಿ ಅಶಿಸ್ತಿನ ವರ್ತನೆ ಮೇರೆಗೆ ಅವರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ.
ಒಲಿಂಪಿಕ್ಸ್ ಕ್ರೀಡಾ ಗ್ರಾಮಕ್ಕೆ ಪ್ರವೇಶಿಸಲು ಅಂತಿಮ್ಗೆ ನೀಡಲಾಗಿದ್ದ ಅಧಿಕೃತ ಐಡಿ ಕಾರ್ಡ್ನ್ನು ತನ್ನ ಸಹೋದರಿ ನಿಶಾ ಅವರಿಗೆ ನೀಡಿದ್ದಾರೆ.
ನಿಯಮದ ಪ್ರಕಾರ ಒಲಿಂಪಿಕ್ ಗೇಮ್ಸ್ ವಿಲೇಜ್ಗೆ ಆಟಗಾರದಲ್ಲದವರು ಪ್ರವೇಶಿಸುವಂತಿಲ್ಲ. ಹೀಗಾಗಿ ಅಂತಿಮ್ ಅವರನ್ನು ಒಲಿಂಪಿಕ್ಸ್ ಗ್ರಾಮದಿಂದ ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…