ಕ್ರೀಡೆ

ವಿಶ್ವ ಜೂನಿಯರ್ ಕುಸ್ತಿ: ಅಂತಿಮ್‌ಗೆ ಚಿನ್ನ

ಹೊಸದಿಲ್ಲಿ: ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್‌ಷಿಪ್ ಮಹಿಳೆಯರ ೫೩ ಕೆ.ಜಿ. ವಿಭಾಗದಲ್ಲಿ ಭಾರತದ ಅಂತಿಮ್ ಪಂಗಾಲ್, ಐತಿಹಾಸಿಕ ಚಿನ್ನ ಸಾಧನೆ ಮಾಡಿದ್ದಾರೆ.

ಈ ಮೂಲಕ ಅಂಡರ್-೨೦ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಭಾರತ ರನ್ನರ್-ಅಪ್: ಇದರೊಂದಿಗೆ ಭಾರತೀಯ ಜೂನಿಯರ್ ಮಹಿಳಾ ಕುಸ್ತಿ ತಂಡವು ಒಟ್ಟು ೧೬೦ ಅಂಕಗಳೊಂದಿಗೆ ರನ್ನರ್-ಅಪ್ ಟ್ರೋಫಿ ಮುಡಿಗೇರಿಸಿಕೊಂಡಿತು. ಜಪಾನ್ ೨೩೦ ಅಂಕಗಳೊಂದಿಗೆ ಮೊದಲನೇ ಹಾಗೂ ಅಮೆರಿಕ ೧೨೪ ಅಂಕಗಳೊಂದಿಗೆ ಮೂರನೇ ಸ್ಥಾನ ಜಯಿಸಿತು. 

ಫೈನಲ್‌ನಲ್ಲಿ ಕಜಕಿಸ್ತಾನದ ಅಲ್ಟಿನ್ ಶಗಾಯೆವಾ ವಿರುದ್ಧ ೮-೦ ಅಂತರದ ಗೆಲುವು ದಾಖಲಿಸಿದ ಅಂತಿಮ್, ಇತಿಹಾಸ ಸೃಷ್ಟಿಸಿದರು. ಅರ್ಹತಾ ಸುತ್ತಿನಲ್ಲಿ ಜರ್ಮನಿಯ ಸ್ಪರ್ಧಿಯನ್ನು ೧೧-೦ ಅಂತರದಲ್ಲಿ ಮಣಿಸಿದ ಅಂತಿಮ್, ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಗ್ರಾಪ್ಲರ್‌ಗೆ ಆಘಾತ ನೀಡಿದರು. ಬಳಿಕ ಸೆಮಿಫೈನಲ್‌ನಲ್ಲಿ ಉಕ್ರೇನ್ ಸ್ಪರ್ಧಿಯ ವಿರುದ್ಧ ಮೇಲುಗೈ ಸಾಧಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದ್ದರು.

ಸೋನಂ, ಪ್ರಿಯಾಂಕಾಗೆ ಬೆಳ್ಳಿ
ಭಾರತದ ಪರ, ೬೨ ಕೆ.ಜಿ. ವಿಭಾಗದಲ್ಲಿ ಸೋನಂ ಮತ್ತು ೬೫ ಕೆ.ಜಿ. ವಿಭಾಗದಲ್ಲಿ ಪ್ರಿಯಾಂಕಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಹಾಗೆಯೇ ೫೭ ಕೆ.ಜಿ. ವಿಭಾಗದಲ್ಲಿ ಸಿಟೊ ಮತ್ತು ೭೨ ಕೆ.ಜಿ ವಿಭಾಗದಲ್ಲಿ ರಿತಿಕಾ ಕಂಚಿನ ಪದಕ ಜಯಿಸಿದರು.

  • ಮಹಿಳೆಯರ ಕುಸ್ತಿ: ೫೩ ಕೆ.ಜಿ.ವಿಭಾಗ
  • ಸೆಮಿಫೈನಲ್‌ನಲ್ಲಿ ಉಕ್ರೇನ್ ವಿರುದ್ಧ ಭಾರಿ ಗೆಲುವು
  • ಫೈನಲ್‌ನಲ್ಲಿ ಕಜಕಿಸ್ತಾನ್ ವಿರುದ್ಧ ೮-೦ ಅಂತರದ ಜಯ
  • ಅಂಡರ್-೨೦ಯಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ
andolana

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

13 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

13 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

14 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

14 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

14 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

14 hours ago