ಕ್ರೀಡೆ

ವಿಶ್ವ ಜೂನಿಯರ್ ಕುಸ್ತಿ: ಅಂತಿಮ್‌ಗೆ ಚಿನ್ನ

ಹೊಸದಿಲ್ಲಿ: ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್‌ಷಿಪ್ ಮಹಿಳೆಯರ ೫೩ ಕೆ.ಜಿ. ವಿಭಾಗದಲ್ಲಿ ಭಾರತದ ಅಂತಿಮ್ ಪಂಗಾಲ್, ಐತಿಹಾಸಿಕ ಚಿನ್ನ ಸಾಧನೆ ಮಾಡಿದ್ದಾರೆ.

ಈ ಮೂಲಕ ಅಂಡರ್-೨೦ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಭಾರತ ರನ್ನರ್-ಅಪ್: ಇದರೊಂದಿಗೆ ಭಾರತೀಯ ಜೂನಿಯರ್ ಮಹಿಳಾ ಕುಸ್ತಿ ತಂಡವು ಒಟ್ಟು ೧೬೦ ಅಂಕಗಳೊಂದಿಗೆ ರನ್ನರ್-ಅಪ್ ಟ್ರೋಫಿ ಮುಡಿಗೇರಿಸಿಕೊಂಡಿತು. ಜಪಾನ್ ೨೩೦ ಅಂಕಗಳೊಂದಿಗೆ ಮೊದಲನೇ ಹಾಗೂ ಅಮೆರಿಕ ೧೨೪ ಅಂಕಗಳೊಂದಿಗೆ ಮೂರನೇ ಸ್ಥಾನ ಜಯಿಸಿತು. 

ಫೈನಲ್‌ನಲ್ಲಿ ಕಜಕಿಸ್ತಾನದ ಅಲ್ಟಿನ್ ಶಗಾಯೆವಾ ವಿರುದ್ಧ ೮-೦ ಅಂತರದ ಗೆಲುವು ದಾಖಲಿಸಿದ ಅಂತಿಮ್, ಇತಿಹಾಸ ಸೃಷ್ಟಿಸಿದರು. ಅರ್ಹತಾ ಸುತ್ತಿನಲ್ಲಿ ಜರ್ಮನಿಯ ಸ್ಪರ್ಧಿಯನ್ನು ೧೧-೦ ಅಂತರದಲ್ಲಿ ಮಣಿಸಿದ ಅಂತಿಮ್, ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಗ್ರಾಪ್ಲರ್‌ಗೆ ಆಘಾತ ನೀಡಿದರು. ಬಳಿಕ ಸೆಮಿಫೈನಲ್‌ನಲ್ಲಿ ಉಕ್ರೇನ್ ಸ್ಪರ್ಧಿಯ ವಿರುದ್ಧ ಮೇಲುಗೈ ಸಾಧಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದ್ದರು.

ಸೋನಂ, ಪ್ರಿಯಾಂಕಾಗೆ ಬೆಳ್ಳಿ
ಭಾರತದ ಪರ, ೬೨ ಕೆ.ಜಿ. ವಿಭಾಗದಲ್ಲಿ ಸೋನಂ ಮತ್ತು ೬೫ ಕೆ.ಜಿ. ವಿಭಾಗದಲ್ಲಿ ಪ್ರಿಯಾಂಕಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಹಾಗೆಯೇ ೫೭ ಕೆ.ಜಿ. ವಿಭಾಗದಲ್ಲಿ ಸಿಟೊ ಮತ್ತು ೭೨ ಕೆ.ಜಿ ವಿಭಾಗದಲ್ಲಿ ರಿತಿಕಾ ಕಂಚಿನ ಪದಕ ಜಯಿಸಿದರು.

  • ಮಹಿಳೆಯರ ಕುಸ್ತಿ: ೫೩ ಕೆ.ಜಿ.ವಿಭಾಗ
  • ಸೆಮಿಫೈನಲ್‌ನಲ್ಲಿ ಉಕ್ರೇನ್ ವಿರುದ್ಧ ಭಾರಿ ಗೆಲುವು
  • ಫೈನಲ್‌ನಲ್ಲಿ ಕಜಕಿಸ್ತಾನ್ ವಿರುದ್ಧ ೮-೦ ಅಂತರದ ಜಯ
  • ಅಂಡರ್-೨೦ಯಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ
andolana

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

5 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

5 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

6 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

6 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

6 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

6 hours ago