ಕ್ರೀಡೆ

ವಿಶ್ವ ಜೂನಿಯರ್ ಕುಸ್ತಿ: ಅಂತಿಮ್‌ಗೆ ಚಿನ್ನ

ಹೊಸದಿಲ್ಲಿ: ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್‌ಷಿಪ್ ಮಹಿಳೆಯರ ೫೩ ಕೆ.ಜಿ. ವಿಭಾಗದಲ್ಲಿ ಭಾರತದ ಅಂತಿಮ್ ಪಂಗಾಲ್, ಐತಿಹಾಸಿಕ ಚಿನ್ನ ಸಾಧನೆ ಮಾಡಿದ್ದಾರೆ.

ಈ ಮೂಲಕ ಅಂಡರ್-೨೦ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಭಾರತ ರನ್ನರ್-ಅಪ್: ಇದರೊಂದಿಗೆ ಭಾರತೀಯ ಜೂನಿಯರ್ ಮಹಿಳಾ ಕುಸ್ತಿ ತಂಡವು ಒಟ್ಟು ೧೬೦ ಅಂಕಗಳೊಂದಿಗೆ ರನ್ನರ್-ಅಪ್ ಟ್ರೋಫಿ ಮುಡಿಗೇರಿಸಿಕೊಂಡಿತು. ಜಪಾನ್ ೨೩೦ ಅಂಕಗಳೊಂದಿಗೆ ಮೊದಲನೇ ಹಾಗೂ ಅಮೆರಿಕ ೧೨೪ ಅಂಕಗಳೊಂದಿಗೆ ಮೂರನೇ ಸ್ಥಾನ ಜಯಿಸಿತು. 

ಫೈನಲ್‌ನಲ್ಲಿ ಕಜಕಿಸ್ತಾನದ ಅಲ್ಟಿನ್ ಶಗಾಯೆವಾ ವಿರುದ್ಧ ೮-೦ ಅಂತರದ ಗೆಲುವು ದಾಖಲಿಸಿದ ಅಂತಿಮ್, ಇತಿಹಾಸ ಸೃಷ್ಟಿಸಿದರು. ಅರ್ಹತಾ ಸುತ್ತಿನಲ್ಲಿ ಜರ್ಮನಿಯ ಸ್ಪರ್ಧಿಯನ್ನು ೧೧-೦ ಅಂತರದಲ್ಲಿ ಮಣಿಸಿದ ಅಂತಿಮ್, ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಗ್ರಾಪ್ಲರ್‌ಗೆ ಆಘಾತ ನೀಡಿದರು. ಬಳಿಕ ಸೆಮಿಫೈನಲ್‌ನಲ್ಲಿ ಉಕ್ರೇನ್ ಸ್ಪರ್ಧಿಯ ವಿರುದ್ಧ ಮೇಲುಗೈ ಸಾಧಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದ್ದರು.

ಸೋನಂ, ಪ್ರಿಯಾಂಕಾಗೆ ಬೆಳ್ಳಿ
ಭಾರತದ ಪರ, ೬೨ ಕೆ.ಜಿ. ವಿಭಾಗದಲ್ಲಿ ಸೋನಂ ಮತ್ತು ೬೫ ಕೆ.ಜಿ. ವಿಭಾಗದಲ್ಲಿ ಪ್ರಿಯಾಂಕಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಹಾಗೆಯೇ ೫೭ ಕೆ.ಜಿ. ವಿಭಾಗದಲ್ಲಿ ಸಿಟೊ ಮತ್ತು ೭೨ ಕೆ.ಜಿ ವಿಭಾಗದಲ್ಲಿ ರಿತಿಕಾ ಕಂಚಿನ ಪದಕ ಜಯಿಸಿದರು.

  • ಮಹಿಳೆಯರ ಕುಸ್ತಿ: ೫೩ ಕೆ.ಜಿ.ವಿಭಾಗ
  • ಸೆಮಿಫೈನಲ್‌ನಲ್ಲಿ ಉಕ್ರೇನ್ ವಿರುದ್ಧ ಭಾರಿ ಗೆಲುವು
  • ಫೈನಲ್‌ನಲ್ಲಿ ಕಜಕಿಸ್ತಾನ್ ವಿರುದ್ಧ ೮-೦ ಅಂತರದ ಜಯ
  • ಅಂಡರ್-೨೦ಯಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ
andolana

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago