ಕ್ರೀಡೆ

ವಿಶ್ವ ಜೂನಿಯರ್ ಕುಸ್ತಿ: ಅಂತಿಮ್‌ಗೆ ಚಿನ್ನ

ಹೊಸದಿಲ್ಲಿ: ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್‌ಷಿಪ್ ಮಹಿಳೆಯರ ೫೩ ಕೆ.ಜಿ. ವಿಭಾಗದಲ್ಲಿ ಭಾರತದ ಅಂತಿಮ್ ಪಂಗಾಲ್, ಐತಿಹಾಸಿಕ ಚಿನ್ನ ಸಾಧನೆ ಮಾಡಿದ್ದಾರೆ.

ಈ ಮೂಲಕ ಅಂಡರ್-೨೦ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಭಾರತ ರನ್ನರ್-ಅಪ್: ಇದರೊಂದಿಗೆ ಭಾರತೀಯ ಜೂನಿಯರ್ ಮಹಿಳಾ ಕುಸ್ತಿ ತಂಡವು ಒಟ್ಟು ೧೬೦ ಅಂಕಗಳೊಂದಿಗೆ ರನ್ನರ್-ಅಪ್ ಟ್ರೋಫಿ ಮುಡಿಗೇರಿಸಿಕೊಂಡಿತು. ಜಪಾನ್ ೨೩೦ ಅಂಕಗಳೊಂದಿಗೆ ಮೊದಲನೇ ಹಾಗೂ ಅಮೆರಿಕ ೧೨೪ ಅಂಕಗಳೊಂದಿಗೆ ಮೂರನೇ ಸ್ಥಾನ ಜಯಿಸಿತು. 

ಫೈನಲ್‌ನಲ್ಲಿ ಕಜಕಿಸ್ತಾನದ ಅಲ್ಟಿನ್ ಶಗಾಯೆವಾ ವಿರುದ್ಧ ೮-೦ ಅಂತರದ ಗೆಲುವು ದಾಖಲಿಸಿದ ಅಂತಿಮ್, ಇತಿಹಾಸ ಸೃಷ್ಟಿಸಿದರು. ಅರ್ಹತಾ ಸುತ್ತಿನಲ್ಲಿ ಜರ್ಮನಿಯ ಸ್ಪರ್ಧಿಯನ್ನು ೧೧-೦ ಅಂತರದಲ್ಲಿ ಮಣಿಸಿದ ಅಂತಿಮ್, ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಗ್ರಾಪ್ಲರ್‌ಗೆ ಆಘಾತ ನೀಡಿದರು. ಬಳಿಕ ಸೆಮಿಫೈನಲ್‌ನಲ್ಲಿ ಉಕ್ರೇನ್ ಸ್ಪರ್ಧಿಯ ವಿರುದ್ಧ ಮೇಲುಗೈ ಸಾಧಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದ್ದರು.

ಸೋನಂ, ಪ್ರಿಯಾಂಕಾಗೆ ಬೆಳ್ಳಿ
ಭಾರತದ ಪರ, ೬೨ ಕೆ.ಜಿ. ವಿಭಾಗದಲ್ಲಿ ಸೋನಂ ಮತ್ತು ೬೫ ಕೆ.ಜಿ. ವಿಭಾಗದಲ್ಲಿ ಪ್ರಿಯಾಂಕಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಹಾಗೆಯೇ ೫೭ ಕೆ.ಜಿ. ವಿಭಾಗದಲ್ಲಿ ಸಿಟೊ ಮತ್ತು ೭೨ ಕೆ.ಜಿ ವಿಭಾಗದಲ್ಲಿ ರಿತಿಕಾ ಕಂಚಿನ ಪದಕ ಜಯಿಸಿದರು.

  • ಮಹಿಳೆಯರ ಕುಸ್ತಿ: ೫೩ ಕೆ.ಜಿ.ವಿಭಾಗ
  • ಸೆಮಿಫೈನಲ್‌ನಲ್ಲಿ ಉಕ್ರೇನ್ ವಿರುದ್ಧ ಭಾರಿ ಗೆಲುವು
  • ಫೈನಲ್‌ನಲ್ಲಿ ಕಜಕಿಸ್ತಾನ್ ವಿರುದ್ಧ ೮-೦ ಅಂತರದ ಜಯ
  • ಅಂಡರ್-೨೦ಯಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ
andolana

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

1 hour ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

4 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago