ಕ್ರೀಡೆ

ಆರ್ಚರಿ ವಿಶ್ವಕಪ್:‌ 5 ಚಿನ್ನ ಸೇರಿ 8 ಪದಕ ಬಾಚಿಕೊಂಡ ಭಾರತ

ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್‌ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ.

5 ಚಿನ್ನದ ಪದಕಗಳು:

ಭಾರತ ಪುರುಷರ ರಿಕರ್ವ್‌ ತಂಡ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ತಂಡವನ್ನು ಫೈನಲ್‌ನಲ್ಲಿ ಸೋಲಿಸಿ ಇತಿಹಾಸ ಬರೆದಿದೆ. ಧೀರಜ್‌, ತರುಣ್‌ದೀಪ್‌ ಮತ್ತು ಪ್ರವೀಣ್‌ ಇದ್ದ ರಿಕರ್ವ್ ತಂಡ ದಕ್ಷಿಣ ಕೊರಿಯಾ ವಿರುದ್ಧ 5-1 ಅಂತರದಿಂದ ಗೆಲುವು ಸಾಧಿಸಿ ಚಿನ್ನದ ಪದಕವನ್ನು 14 ವರ್ಷಗಳ ಬಳಿಕ ಗೆದ್ದಿದೆ.

ಅತ್ತ ಮಹಿಳೆಯರ ಕಾಂಪೌಂಡ್‌ ಇಂಡ್ಯುವಿಜುಯಲ್‌ನಲ್ಲಿ ಜ್ಯೋತಿ ಸುರೇಖಾ ವೆನ್ನಮ್‌ ಚಿನ್ನದ ಪದಕವನ್ನು ಗೆದ್ದಿದ್ದಾರೆ

ಇನ್ನು ಟೀಮ್‌ ಕಾಂಪೌಂಡ್‌ ಸುತ್ತಿನಲ್ಲಿ ಭಾರತದ ಪುರುಷರ ತಂಡ ನೆದರ್ಲೆಂಡ್ಸ್‌ ಸೋಲಿಸುವ ಮೂಲಕ ಚಿನ್ನದ ಪದಕ, ಇಟಲಿ ಸೋಲಿಸಿದ ಮಹಿಳೆಯರ ತಂಡ ಚಿನ್ನದ ಪದಕ ಮತ್ತು ಜ್ಯೋತಿ ಹಾಗೂ ಅಭಿಷೇಕ್‌ ಮಿಕ್ಸ್ಡ್‌ ತಂಡ ಎಸ್ಟೋನಿಯಾವನ್ನು ಸೋಲಿಸಿ ಚಿನ್ನದ ಪದಕವನ್ನು ಗೆದ್ದಿದೆ.

ಎರಡು ಬೆಳ್ಳಿ, ಒಂದು ಕಂಚು

ಮೆಕ್ಸಿಕೊ ವಿರುದ್ಧ ಗೆದ್ದ ಅಂಕತ ಭಗತ್‌ ಹಾಗೂ ಧೀರಜ್‌ ಮಿಕ್ಸ್ಡ್‌ ಟೀಮ್‌ ಕಂಚಿನ ಪದಕವನ್ನು ಗೆದ್ದರೆ, ಪುರುಷರ ವಿಭಾಗದಲ್ಲಿ ಪ್ರಿಯಾನ್ಷ್‌ ಮತ್ತು ಮಹಿಳೆಯರ ವಿಭಾಗದಲ್ಲಿ ದೀಪಿಕಾ ಕುಮಾರಿ ಬೆಳ್ಳಿ ಪದಕವನ್ನು ಗೆದ್ದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

38 mins ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

40 mins ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

41 mins ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

43 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

51 mins ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

55 mins ago