ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ.
5 ಚಿನ್ನದ ಪದಕಗಳು:
ಭಾರತ ಪುರುಷರ ರಿಕರ್ವ್ ತಂಡ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ತಂಡವನ್ನು ಫೈನಲ್ನಲ್ಲಿ ಸೋಲಿಸಿ ಇತಿಹಾಸ ಬರೆದಿದೆ. ಧೀರಜ್, ತರುಣ್ದೀಪ್ ಮತ್ತು ಪ್ರವೀಣ್ ಇದ್ದ ರಿಕರ್ವ್ ತಂಡ ದಕ್ಷಿಣ ಕೊರಿಯಾ ವಿರುದ್ಧ 5-1 ಅಂತರದಿಂದ ಗೆಲುವು ಸಾಧಿಸಿ ಚಿನ್ನದ ಪದಕವನ್ನು 14 ವರ್ಷಗಳ ಬಳಿಕ ಗೆದ್ದಿದೆ.
ಅತ್ತ ಮಹಿಳೆಯರ ಕಾಂಪೌಂಡ್ ಇಂಡ್ಯುವಿಜುಯಲ್ನಲ್ಲಿ ಜ್ಯೋತಿ ಸುರೇಖಾ ವೆನ್ನಮ್ ಚಿನ್ನದ ಪದಕವನ್ನು ಗೆದ್ದಿದ್ದಾರೆ
ಇನ್ನು ಟೀಮ್ ಕಾಂಪೌಂಡ್ ಸುತ್ತಿನಲ್ಲಿ ಭಾರತದ ಪುರುಷರ ತಂಡ ನೆದರ್ಲೆಂಡ್ಸ್ ಸೋಲಿಸುವ ಮೂಲಕ ಚಿನ್ನದ ಪದಕ, ಇಟಲಿ ಸೋಲಿಸಿದ ಮಹಿಳೆಯರ ತಂಡ ಚಿನ್ನದ ಪದಕ ಮತ್ತು ಜ್ಯೋತಿ ಹಾಗೂ ಅಭಿಷೇಕ್ ಮಿಕ್ಸ್ಡ್ ತಂಡ ಎಸ್ಟೋನಿಯಾವನ್ನು ಸೋಲಿಸಿ ಚಿನ್ನದ ಪದಕವನ್ನು ಗೆದ್ದಿದೆ.
ಎರಡು ಬೆಳ್ಳಿ, ಒಂದು ಕಂಚು
ಮೆಕ್ಸಿಕೊ ವಿರುದ್ಧ ಗೆದ್ದ ಅಂಕತ ಭಗತ್ ಹಾಗೂ ಧೀರಜ್ ಮಿಕ್ಸ್ಡ್ ಟೀಮ್ ಕಂಚಿನ ಪದಕವನ್ನು ಗೆದ್ದರೆ, ಪುರುಷರ ವಿಭಾಗದಲ್ಲಿ ಪ್ರಿಯಾನ್ಷ್ ಮತ್ತು ಮಹಿಳೆಯರ ವಿಭಾಗದಲ್ಲಿ ದೀಪಿಕಾ ಕುಮಾರಿ ಬೆಳ್ಳಿ ಪದಕವನ್ನು ಗೆದ್ದರು.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…