ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ.
5 ಚಿನ್ನದ ಪದಕಗಳು:
ಭಾರತ ಪುರುಷರ ರಿಕರ್ವ್ ತಂಡ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ತಂಡವನ್ನು ಫೈನಲ್ನಲ್ಲಿ ಸೋಲಿಸಿ ಇತಿಹಾಸ ಬರೆದಿದೆ. ಧೀರಜ್, ತರುಣ್ದೀಪ್ ಮತ್ತು ಪ್ರವೀಣ್ ಇದ್ದ ರಿಕರ್ವ್ ತಂಡ ದಕ್ಷಿಣ ಕೊರಿಯಾ ವಿರುದ್ಧ 5-1 ಅಂತರದಿಂದ ಗೆಲುವು ಸಾಧಿಸಿ ಚಿನ್ನದ ಪದಕವನ್ನು 14 ವರ್ಷಗಳ ಬಳಿಕ ಗೆದ್ದಿದೆ.
ಅತ್ತ ಮಹಿಳೆಯರ ಕಾಂಪೌಂಡ್ ಇಂಡ್ಯುವಿಜುಯಲ್ನಲ್ಲಿ ಜ್ಯೋತಿ ಸುರೇಖಾ ವೆನ್ನಮ್ ಚಿನ್ನದ ಪದಕವನ್ನು ಗೆದ್ದಿದ್ದಾರೆ
ಇನ್ನು ಟೀಮ್ ಕಾಂಪೌಂಡ್ ಸುತ್ತಿನಲ್ಲಿ ಭಾರತದ ಪುರುಷರ ತಂಡ ನೆದರ್ಲೆಂಡ್ಸ್ ಸೋಲಿಸುವ ಮೂಲಕ ಚಿನ್ನದ ಪದಕ, ಇಟಲಿ ಸೋಲಿಸಿದ ಮಹಿಳೆಯರ ತಂಡ ಚಿನ್ನದ ಪದಕ ಮತ್ತು ಜ್ಯೋತಿ ಹಾಗೂ ಅಭಿಷೇಕ್ ಮಿಕ್ಸ್ಡ್ ತಂಡ ಎಸ್ಟೋನಿಯಾವನ್ನು ಸೋಲಿಸಿ ಚಿನ್ನದ ಪದಕವನ್ನು ಗೆದ್ದಿದೆ.
ಎರಡು ಬೆಳ್ಳಿ, ಒಂದು ಕಂಚು
ಮೆಕ್ಸಿಕೊ ವಿರುದ್ಧ ಗೆದ್ದ ಅಂಕತ ಭಗತ್ ಹಾಗೂ ಧೀರಜ್ ಮಿಕ್ಸ್ಡ್ ಟೀಮ್ ಕಂಚಿನ ಪದಕವನ್ನು ಗೆದ್ದರೆ, ಪುರುಷರ ವಿಭಾಗದಲ್ಲಿ ಪ್ರಿಯಾನ್ಷ್ ಮತ್ತು ಮಹಿಳೆಯರ ವಿಭಾಗದಲ್ಲಿ ದೀಪಿಕಾ ಕುಮಾರಿ ಬೆಳ್ಳಿ ಪದಕವನ್ನು ಗೆದ್ದರು.
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…