ಕ್ರೀಡೆ

ಆರ್ಚರಿ ವಿಶ್ವಕಪ್:‌ 5 ಚಿನ್ನ ಸೇರಿ 8 ಪದಕ ಬಾಚಿಕೊಂಡ ಭಾರತ

ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್‌ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ.

5 ಚಿನ್ನದ ಪದಕಗಳು:

ಭಾರತ ಪುರುಷರ ರಿಕರ್ವ್‌ ತಂಡ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ತಂಡವನ್ನು ಫೈನಲ್‌ನಲ್ಲಿ ಸೋಲಿಸಿ ಇತಿಹಾಸ ಬರೆದಿದೆ. ಧೀರಜ್‌, ತರುಣ್‌ದೀಪ್‌ ಮತ್ತು ಪ್ರವೀಣ್‌ ಇದ್ದ ರಿಕರ್ವ್ ತಂಡ ದಕ್ಷಿಣ ಕೊರಿಯಾ ವಿರುದ್ಧ 5-1 ಅಂತರದಿಂದ ಗೆಲುವು ಸಾಧಿಸಿ ಚಿನ್ನದ ಪದಕವನ್ನು 14 ವರ್ಷಗಳ ಬಳಿಕ ಗೆದ್ದಿದೆ.

ಅತ್ತ ಮಹಿಳೆಯರ ಕಾಂಪೌಂಡ್‌ ಇಂಡ್ಯುವಿಜುಯಲ್‌ನಲ್ಲಿ ಜ್ಯೋತಿ ಸುರೇಖಾ ವೆನ್ನಮ್‌ ಚಿನ್ನದ ಪದಕವನ್ನು ಗೆದ್ದಿದ್ದಾರೆ

ಇನ್ನು ಟೀಮ್‌ ಕಾಂಪೌಂಡ್‌ ಸುತ್ತಿನಲ್ಲಿ ಭಾರತದ ಪುರುಷರ ತಂಡ ನೆದರ್ಲೆಂಡ್ಸ್‌ ಸೋಲಿಸುವ ಮೂಲಕ ಚಿನ್ನದ ಪದಕ, ಇಟಲಿ ಸೋಲಿಸಿದ ಮಹಿಳೆಯರ ತಂಡ ಚಿನ್ನದ ಪದಕ ಮತ್ತು ಜ್ಯೋತಿ ಹಾಗೂ ಅಭಿಷೇಕ್‌ ಮಿಕ್ಸ್ಡ್‌ ತಂಡ ಎಸ್ಟೋನಿಯಾವನ್ನು ಸೋಲಿಸಿ ಚಿನ್ನದ ಪದಕವನ್ನು ಗೆದ್ದಿದೆ.

ಎರಡು ಬೆಳ್ಳಿ, ಒಂದು ಕಂಚು

ಮೆಕ್ಸಿಕೊ ವಿರುದ್ಧ ಗೆದ್ದ ಅಂಕತ ಭಗತ್‌ ಹಾಗೂ ಧೀರಜ್‌ ಮಿಕ್ಸ್ಡ್‌ ಟೀಮ್‌ ಕಂಚಿನ ಪದಕವನ್ನು ಗೆದ್ದರೆ, ಪುರುಷರ ವಿಭಾಗದಲ್ಲಿ ಪ್ರಿಯಾನ್ಷ್‌ ಮತ್ತು ಮಹಿಳೆಯರ ವಿಭಾಗದಲ್ಲಿ ದೀಪಿಕಾ ಕುಮಾರಿ ಬೆಳ್ಳಿ ಪದಕವನ್ನು ಗೆದ್ದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

2 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

2 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

3 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

3 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

3 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

6 hours ago