ಬೆಂಗಳೂರು/ಮುಂಬೈ: ಭಾರತ ಬ್ಯಾಸ್ಕೆಟ್ಬಾಲ್ ತಂಡದ ಮಾಜಿ ನಾಯಕ ಗುಲಾಮ್ ಅಬ್ಬಾಸ್ ಮುಂತಾಸಿರ್ (80) ದೀರ್ಘ ಕಾಲದ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ಮುಂಬೈನಲ್ಲಿ ನಿಧನರಾದರು.
ಅವರಿಗೆ ಪತ್ನಿ, ಮಗಳು ಹಾಗೂ ಅಣ್ಣ ಇದ್ದಾರೆ.
1969 ಹಾಗೂ 1975ರಲ್ಲಿ ಏಷ್ಯನ್ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ನಲ್ಲಿ ಅಬ್ಬಾಸ್ ಅವರು ಭಾರತ ತಂಡವನ್ನು ಮುನ್ನಡೆಸಿದ್ದರು. 1970ರಲ್ಲಿ ಅವರು ಏಷ್ಯನ್ ಆಲ್ ಸ್ಟಾರ್ ತಂಡದಲ್ಲಿಯೂ ಸ್ಥಾನ ಪಡೆದಿದ್ದರು. ಅದೇ ವರ್ಷ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.
ಮಿಂಚಿನ ವೇಗದ ಆಟಕ್ಕೆ ಹೆಸರಾಗಿದ್ದ ಅಬ್ಬಾಸ್ ಅವರದ್ದು ಬ್ಯಾಸ್ಕೆಟ್ಬಾಲ್ ಕ್ರೀಡೆಯಲ್ಲಿ ಅಚ್ಚಳಿಯದ ಹೆಸರು. 5.11 ಅಡಿ ಎತ್ತರವಿದ್ದ ಅವರ ಆಟದ ಶೈಲಿಯು ಜನಪ್ರಿಯವಾಗಿತ್ತು. ಮುಂಬೈ ಹಾಗೂ ರೈಲ್ವೆ ತಂಡಗಳ ಪ್ರಮುಖ ಆಟಗಾರರಾಗಿದ್ದರು.
ಅಬ್ಬಾಸ್ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…
ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…
೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…