ಬೆಂಗಳೂರು/ಮುಂಬೈ: ಭಾರತ ಬ್ಯಾಸ್ಕೆಟ್ಬಾಲ್ ತಂಡದ ಮಾಜಿ ನಾಯಕ ಗುಲಾಮ್ ಅಬ್ಬಾಸ್ ಮುಂತಾಸಿರ್ (80) ದೀರ್ಘ ಕಾಲದ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ಮುಂಬೈನಲ್ಲಿ ನಿಧನರಾದರು.
ಅವರಿಗೆ ಪತ್ನಿ, ಮಗಳು ಹಾಗೂ ಅಣ್ಣ ಇದ್ದಾರೆ.
1969 ಹಾಗೂ 1975ರಲ್ಲಿ ಏಷ್ಯನ್ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ನಲ್ಲಿ ಅಬ್ಬಾಸ್ ಅವರು ಭಾರತ ತಂಡವನ್ನು ಮುನ್ನಡೆಸಿದ್ದರು. 1970ರಲ್ಲಿ ಅವರು ಏಷ್ಯನ್ ಆಲ್ ಸ್ಟಾರ್ ತಂಡದಲ್ಲಿಯೂ ಸ್ಥಾನ ಪಡೆದಿದ್ದರು. ಅದೇ ವರ್ಷ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.
ಮಿಂಚಿನ ವೇಗದ ಆಟಕ್ಕೆ ಹೆಸರಾಗಿದ್ದ ಅಬ್ಬಾಸ್ ಅವರದ್ದು ಬ್ಯಾಸ್ಕೆಟ್ಬಾಲ್ ಕ್ರೀಡೆಯಲ್ಲಿ ಅಚ್ಚಳಿಯದ ಹೆಸರು. 5.11 ಅಡಿ ಎತ್ತರವಿದ್ದ ಅವರ ಆಟದ ಶೈಲಿಯು ಜನಪ್ರಿಯವಾಗಿತ್ತು. ಮುಂಬೈ ಹಾಗೂ ರೈಲ್ವೆ ತಂಡಗಳ ಪ್ರಮುಖ ಆಟಗಾರರಾಗಿದ್ದರು.
ಅಬ್ಬಾಸ್ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.…
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…