ಕ್ರೀಡೆ

ಅರ್ಜುನ ಪ್ರಶಸ್ತಿ ವಿಜೇತ ಬ್ಯಾಸ್ಕೆಟ್‌ಬಾಲ್ ತಂಡದ ಮಾಜಿ ನಾಯಕ ಅಬ್ಬಾಸ್ ಇನ್ನಿಲ್ಲ

ಬೆಂಗಳೂರು/ಮುಂಬೈ: ಭಾರತ ಬ್ಯಾಸ್ಕೆಟ್‌ಬಾಲ್ ತಂಡದ ಮಾಜಿ ನಾಯಕ ಗುಲಾಮ್ ಅಬ್ಬಾಸ್ ಮುಂತಾಸಿರ್ (80) ದೀರ್ಘ ಕಾಲದ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ಮುಂಬೈನಲ್ಲಿ ನಿಧನರಾದರು.
ಅವರಿಗೆ ಪತ್ನಿ, ಮಗಳು ಹಾಗೂ ಅಣ್ಣ ಇದ್ದಾರೆ.

1969 ಹಾಗೂ 1975ರಲ್ಲಿ ಏಷ್ಯನ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಅಬ್ಬಾಸ್ ಅವರು ಭಾರತ ತಂಡವನ್ನು ಮುನ್ನಡೆಸಿದ್ದರು. 1970ರಲ್ಲಿ ಅವರು ಏಷ್ಯನ್ ಆಲ್‌ ಸ್ಟಾರ್ ತಂಡದಲ್ಲಿಯೂ ಸ್ಥಾನ ಪಡೆದಿದ್ದರು.  ಅದೇ ವರ್ಷ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ಮಿಂಚಿನ ವೇಗದ ಆಟಕ್ಕೆ ಹೆಸರಾಗಿದ್ದ ಅಬ್ಬಾಸ್ ಅವರದ್ದು ಬ್ಯಾಸ್ಕೆಟ್‌ಬಾಲ್ ಕ್ರೀಡೆಯಲ್ಲಿ ಅಚ್ಚಳಿಯದ ಹೆಸರು. 5.11 ಅಡಿ ಎತ್ತರವಿದ್ದ ಅವರ  ಆಟದ ಶೈಲಿಯು ಜನಪ್ರಿಯವಾಗಿತ್ತು. ಮುಂಬೈ ಹಾಗೂ ರೈಲ್ವೆ ತಂಡಗಳ ಪ್ರಮುಖ ಆಟಗಾರರಾಗಿದ್ದರು.

ಅಬ್ಬಾಸ್ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

5 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

5 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

5 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

6 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

6 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

6 hours ago