ಕ್ರೀಡೆ

ಅರ್ಜುನ ಪ್ರಶಸ್ತಿ ವಿಜೇತ ಬ್ಯಾಸ್ಕೆಟ್‌ಬಾಲ್ ತಂಡದ ಮಾಜಿ ನಾಯಕ ಅಬ್ಬಾಸ್ ಇನ್ನಿಲ್ಲ

ಬೆಂಗಳೂರು/ಮುಂಬೈ: ಭಾರತ ಬ್ಯಾಸ್ಕೆಟ್‌ಬಾಲ್ ತಂಡದ ಮಾಜಿ ನಾಯಕ ಗುಲಾಮ್ ಅಬ್ಬಾಸ್ ಮುಂತಾಸಿರ್ (80) ದೀರ್ಘ ಕಾಲದ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ಮುಂಬೈನಲ್ಲಿ ನಿಧನರಾದರು.
ಅವರಿಗೆ ಪತ್ನಿ, ಮಗಳು ಹಾಗೂ ಅಣ್ಣ ಇದ್ದಾರೆ.

1969 ಹಾಗೂ 1975ರಲ್ಲಿ ಏಷ್ಯನ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಅಬ್ಬಾಸ್ ಅವರು ಭಾರತ ತಂಡವನ್ನು ಮುನ್ನಡೆಸಿದ್ದರು. 1970ರಲ್ಲಿ ಅವರು ಏಷ್ಯನ್ ಆಲ್‌ ಸ್ಟಾರ್ ತಂಡದಲ್ಲಿಯೂ ಸ್ಥಾನ ಪಡೆದಿದ್ದರು.  ಅದೇ ವರ್ಷ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ಮಿಂಚಿನ ವೇಗದ ಆಟಕ್ಕೆ ಹೆಸರಾಗಿದ್ದ ಅಬ್ಬಾಸ್ ಅವರದ್ದು ಬ್ಯಾಸ್ಕೆಟ್‌ಬಾಲ್ ಕ್ರೀಡೆಯಲ್ಲಿ ಅಚ್ಚಳಿಯದ ಹೆಸರು. 5.11 ಅಡಿ ಎತ್ತರವಿದ್ದ ಅವರ  ಆಟದ ಶೈಲಿಯು ಜನಪ್ರಿಯವಾಗಿತ್ತು. ಮುಂಬೈ ಹಾಗೂ ರೈಲ್ವೆ ತಂಡಗಳ ಪ್ರಮುಖ ಆಟಗಾರರಾಗಿದ್ದರು.

ಅಬ್ಬಾಸ್ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.

andolanait

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

1 hour ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

9 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

9 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

9 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

9 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago