ಮುಂಬೈ : ಕ್ರಿಕೆಟ್ ಪ್ರಿಯರು ಬಹುಸಮಯ ಕಾತುರದಿಂದ ಎದುರು ನೋಡಿದ್ದ ದಿನ ಬಂದಾಗಿದ್ದು, ಬ್ಯಾಟಿಂಗ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 22ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಎದುರು ಕಣಕ್ಕಿಳಿದ ಎಡಗೈ ವೇಗದ ಬೌಲರ್ 24 ವರ್ಷದ ಅರ್ಜುನ್ ತೆಂಡೂಲ್ಕರ್ ತಮ್ಮ ಐಪಿಎಲ್ ವೃತ್ತಿಬದುಕು ಆರಂಭಿಸಿದರು.
ರೋಹಿತ್ ಶರ್ಮಾ ಕ್ಯಾಪ್ ತೊಡಿಸಿದರು
ಆಟದ ಹೊರೆ ನಿರ್ವಹಣೆ ನಿಟ್ಟಿನಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ತೆಗೆದುಕೊಂಡರು. ಅವರ ಜಾಗದಲ್ಲಿ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ಇನ್ನು ಮುಂಬೈ ಇಂಡಿಯನ್ಸ್ ತಂಡದ ಆಡುವ 11ರ ಬಳಗಕ್ಕೆ ಇಬ್ಬರು ಆಟಗಾರರು ಪದಾರ್ಪಣೆ ಮಾಡಿದರು. ರೋಹಿತ್ ಶರ್ಮಾ ಅವರಿಂದ ಕ್ಯಾಪ್ ಸ್ವೀಕರಿಸಿದ ಅರ್ಜುನ್ ತೆಂಡೂಲ್ಕರ್ ಮತ್ತು ದಕ್ಷಿಣ ಆಫ್ರಿಕಾದ ಎಡಗೈ ವೇಗದ ಬೌಲರ್ ಡುವಾನ್ ಯೆನ್ಸನ್ ಐಪಿಎಲ್ಗೆ ಪದಾರ್ಪಣೆ ಮಾಡಿದರು.
ಪಂದ್ಯಕ್ಕೂ ಮುನ್ನ ಆನ್ ಫೀಲ್ಡ್ನಲ್ಲಿ ಅರ್ಜುನ್ ತೆಂಡೂಲ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಒಟ್ಟಾಗಿ ಕಾಣಿಸಿಕೊಂಡರು. ಪುತ್ರನ ಪದಾರ್ಪಣೆಯ ಬಗ್ಗೆ ತಿಳಿದಿದ್ದ ಮಾಸ್ಟರ್ ಬ್ಲಾಸ್ಟರ್ ಕೆಲ ಮಹತ್ವದ ಸಲಹೆಗಳನ್ನು ನೀಡುತ್ತಿರುವುದು ಕಂಡುಬಂದಿತು. ಅಂತೆಯೇ ಮುಂಬೈ ಪರ ಬೌಲಿಂಗ್ನಲ್ಲಿ ಇನಿಂಗ್ಸ್ ಆರಂಭಿಸಿದ ಎಡಗೈ ವೇಗಿ ಅರ್ಜುನ್ ತೆಂಡೂಲ್ಕರ್, ಮೊದಲ ಎರಡು ಓವರ್ಗಳಲ್ಲಿ 18 ರನ್ ಕೊಟ್ಟರು. ಹೊಸ ಚೆಂಡಿನಲ್ಲಿ ಉತ್ತಮ ಸ್ವಿಂಗ್ ತರುವ ಮೂಲಕ ಗಮನ ಸೆಳೆದರು.
ಮುಂಬೈನಿಂದ ಗೋವಾ ತಂಡಕ್ಕೆ
ದೇಶಿ ಕ್ರಿಕೆಟ್ನಲ್ಲಿ ಮುಂಬೈ ತಂಡದ ಪರ ಆಡಿದ್ದ ಅರ್ಜುನ್ ತೆಂಡೂಲ್ಕರ್, ನಂತರ ಅವಕಾಶ ಹುಡುಕಿಕೊಂಡು ಗೋವಾ ಕ್ರಿಕೆಟ್ ಸಂಸ್ಥೆ ತಂಡದ ಪರ ಆಡಲು ಮುಂದಾದರು. ಈವರೆಗೆ ತಲಾ 7 ರಣಜಿ ಟ್ರೋಫಿ ಕ್ರಿಕೆಟ್ ಮತ್ತು ಲಿಸ್ಟ್ ‘ಎ’ ಕ್ರಿಕೆಟ್ ಪಂದ್ಯಗಳನ್ನು ಆಡಿರುವ ಅರ್ಜುನ್, ಕ್ರಮವಾಗಿ 12 ಮತ್ತು 8 ವಿಕೆಟ್ಗಳನ್ನು ಪಡೆದಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಆಡಿರುವ 9 ಪಂದ್ಯಗಳಲ್ಲಿ 12 ವಿಕೆಟ್ಗಳನ್ನು ಪಡೆದಿದ್ದಾರೆ. ಐಪಿಎಲ್ 2021 ಟೂರ್ನಿ ಸಲುವಾಗಿ ನಡೆದ ಆಟಗಾರರ ಹರಾಜಿನಲ್ಲಿ ಅರ್ಜುನ್ ಮುಂಬೈ ಇಂಡಿಯನ್ಸ್ ಸೇರಿದ್ದರು, ಐಪಿಎಲ್ 2023 ಟೂರ್ನಿ ಸಲುವಾಗಿ ಮುಂಬೈ ತಂಡ ಹರಾಜಿನಲ್ಲಿ 30 ಲಕ್ಷ ರೂ. ನೀಡಿ ಅರ್ಜುನ್ ಸೇವೆಯನ್ನು ಮರಳಿ ತನ್ನದಾಗಿಸಿಕೊಂಡಿತ್ತು.
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…
ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…