ಕ್ರೀಡೆ

ಕೊನೆಗೂ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಅರ್ಜುನ್ ತೆಂಡೂಲ್ಕರ್‌!

ಮುಂಬೈ : ಕ್ರಿಕೆಟ್‌ ಪ್ರಿಯರು ಬಹುಸಮಯ ಕಾತುರದಿಂದ ಎದುರು ನೋಡಿದ್ದ ದಿನ ಬಂದಾಗಿದ್ದು, ಬ್ಯಾಟಿಂಗ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 22ನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಎದುರು ಕಣಕ್ಕಿಳಿದ ಎಡಗೈ ವೇಗದ ಬೌಲರ್‌ 24 ವರ್ಷದ ಅರ್ಜುನ್‌ ತೆಂಡೂಲ್ಕರ್‌ ತಮ್ಮ ಐಪಿಎಲ್‌ ವೃತ್ತಿಬದುಕು ಆರಂಭಿಸಿದರು.‌

ರೋಹಿತ್‌ ಶರ್ಮಾ ಕ್ಯಾಪ್‌ ತೊಡಿಸಿದರು
ಆಟದ ಹೊರೆ ನಿರ್ವಹಣೆ ನಿಟ್ಟಿನಲ್ಲಿ ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮಾ ವಿಶ್ರಾಂತಿ ತೆಗೆದುಕೊಂಡರು. ಅವರ ಜಾಗದಲ್ಲಿ ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ಇನ್ನು ಮುಂಬೈ ಇಂಡಿಯನ್ಸ್‌ ತಂಡದ ಆಡುವ 11ರ ಬಳಗಕ್ಕೆ ಇಬ್ಬರು ಆಟಗಾರರು ಪದಾರ್ಪಣೆ ಮಾಡಿದರು. ರೋಹಿತ್‌ ಶರ್ಮಾ ಅವರಿಂದ ಕ್ಯಾಪ್‌ ಸ್ವೀಕರಿಸಿದ ಅರ್ಜುನ್‌ ತೆಂಡೂಲ್ಕರ್‌ ಮತ್ತು ದಕ್ಷಿಣ ಆಫ್ರಿಕಾದ ಎಡಗೈ ವೇಗದ ಬೌಲರ್‌ ಡುವಾನ್‌ ಯೆನ್ಸನ್‌ ಐಪಿಎಲ್‌ಗೆ ಪದಾರ್ಪಣೆ ಮಾಡಿದರು.

ಪಂದ್ಯಕ್ಕೂ ಮುನ್ನ ಆನ್‌ ಫೀಲ್ಡ್‌ನಲ್ಲಿ ಅರ್ಜುನ್‌ ತೆಂಡೂಲ್ಕರ್‌ ಮತ್ತು ಸಚಿನ್ ತೆಂಡೂಲ್ಕರ್‌ ಒಟ್ಟಾಗಿ ಕಾಣಿಸಿಕೊಂಡರು. ಪುತ್ರನ ಪದಾರ್ಪಣೆಯ ಬಗ್ಗೆ ತಿಳಿದಿದ್ದ ಮಾಸ್ಟರ್‌ ಬ್ಲಾಸ್ಟರ್‌ ಕೆಲ ಮಹತ್ವದ ಸಲಹೆಗಳನ್ನು ನೀಡುತ್ತಿರುವುದು ಕಂಡುಬಂದಿತು. ಅಂತೆಯೇ ಮುಂಬೈ ಪರ ಬೌಲಿಂಗ್‌ನಲ್ಲಿ ಇನಿಂಗ್ಸ್‌ ಆರಂಭಿಸಿದ ಎಡಗೈ ವೇಗಿ ಅರ್ಜುನ್‌ ತೆಂಡೂಲ್ಕರ್‌, ಮೊದಲ ಎರಡು ಓವರ್‌ಗಳಲ್ಲಿ 18 ರನ್‌ ಕೊಟ್ಟರು. ಹೊಸ ಚೆಂಡಿನಲ್ಲಿ ಉತ್ತಮ ಸ್ವಿಂಗ್‌ ತರುವ ಮೂಲಕ ಗಮನ ಸೆಳೆದರು.

ಮುಂಬೈನಿಂದ ಗೋವಾ ತಂಡಕ್ಕೆ
ದೇಶಿ ಕ್ರಿಕೆಟ್‌ನಲ್ಲಿ ಮುಂಬೈ ತಂಡದ ಪರ ಆಡಿದ್ದ ಅರ್ಜುನ್‌ ತೆಂಡೂಲ್ಕರ್‌, ನಂತರ ಅವಕಾಶ ಹುಡುಕಿಕೊಂಡು ಗೋವಾ ಕ್ರಿಕೆಟ್‌ ಸಂಸ್ಥೆ ತಂಡದ ಪರ ಆಡಲು ಮುಂದಾದರು. ಈವರೆಗೆ ತಲಾ 7 ರಣಜಿ ಟ್ರೋಫಿ ಕ್ರಿಕೆಟ್‌ ಮತ್ತು ಲಿಸ್ಟ್‌ ‘ಎ’ ಕ್ರಿಕೆಟ್‌ ಪಂದ್ಯಗಳನ್ನು ಆಡಿರುವ ಅರ್ಜುನ್‌, ಕ್ರಮವಾಗಿ 12 ಮತ್ತು 8 ವಿಕೆಟ್‌ಗಳನ್ನು ಪಡೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಆಡಿರುವ 9 ಪಂದ್ಯಗಳಲ್ಲಿ 12 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ 2021 ಟೂರ್ನಿ ಸಲುವಾಗಿ ನಡೆದ ಆಟಗಾರರ ಹರಾಜಿನಲ್ಲಿ ಅರ್ಜುನ್‌ ಮುಂಬೈ ಇಂಡಿಯನ್ಸ್‌ ಸೇರಿದ್ದರು, ಐಪಿಎಲ್‌ 2023 ಟೂರ್ನಿ ಸಲುವಾಗಿ ಮುಂಬೈ ತಂಡ ಹರಾಜಿನಲ್ಲಿ 30 ಲಕ್ಷ ರೂ. ನೀಡಿ ಅರ್ಜುನ್ ಸೇವೆಯನ್ನು ಮರಳಿ ತನ್ನದಾಗಿಸಿಕೊಂಡಿತ್ತು.

 

andolanait

Recent Posts

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

4 mins ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

11 mins ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

1 hour ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

2 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

5 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

5 hours ago