ಕ್ರೀಡೆ

ಕೊನೆಗೂ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಅರ್ಜುನ್ ತೆಂಡೂಲ್ಕರ್‌!

ಮುಂಬೈ : ಕ್ರಿಕೆಟ್‌ ಪ್ರಿಯರು ಬಹುಸಮಯ ಕಾತುರದಿಂದ ಎದುರು ನೋಡಿದ್ದ ದಿನ ಬಂದಾಗಿದ್ದು, ಬ್ಯಾಟಿಂಗ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 22ನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಎದುರು ಕಣಕ್ಕಿಳಿದ ಎಡಗೈ ವೇಗದ ಬೌಲರ್‌ 24 ವರ್ಷದ ಅರ್ಜುನ್‌ ತೆಂಡೂಲ್ಕರ್‌ ತಮ್ಮ ಐಪಿಎಲ್‌ ವೃತ್ತಿಬದುಕು ಆರಂಭಿಸಿದರು.‌

ರೋಹಿತ್‌ ಶರ್ಮಾ ಕ್ಯಾಪ್‌ ತೊಡಿಸಿದರು
ಆಟದ ಹೊರೆ ನಿರ್ವಹಣೆ ನಿಟ್ಟಿನಲ್ಲಿ ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮಾ ವಿಶ್ರಾಂತಿ ತೆಗೆದುಕೊಂಡರು. ಅವರ ಜಾಗದಲ್ಲಿ ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ಇನ್ನು ಮುಂಬೈ ಇಂಡಿಯನ್ಸ್‌ ತಂಡದ ಆಡುವ 11ರ ಬಳಗಕ್ಕೆ ಇಬ್ಬರು ಆಟಗಾರರು ಪದಾರ್ಪಣೆ ಮಾಡಿದರು. ರೋಹಿತ್‌ ಶರ್ಮಾ ಅವರಿಂದ ಕ್ಯಾಪ್‌ ಸ್ವೀಕರಿಸಿದ ಅರ್ಜುನ್‌ ತೆಂಡೂಲ್ಕರ್‌ ಮತ್ತು ದಕ್ಷಿಣ ಆಫ್ರಿಕಾದ ಎಡಗೈ ವೇಗದ ಬೌಲರ್‌ ಡುವಾನ್‌ ಯೆನ್ಸನ್‌ ಐಪಿಎಲ್‌ಗೆ ಪದಾರ್ಪಣೆ ಮಾಡಿದರು.

ಪಂದ್ಯಕ್ಕೂ ಮುನ್ನ ಆನ್‌ ಫೀಲ್ಡ್‌ನಲ್ಲಿ ಅರ್ಜುನ್‌ ತೆಂಡೂಲ್ಕರ್‌ ಮತ್ತು ಸಚಿನ್ ತೆಂಡೂಲ್ಕರ್‌ ಒಟ್ಟಾಗಿ ಕಾಣಿಸಿಕೊಂಡರು. ಪುತ್ರನ ಪದಾರ್ಪಣೆಯ ಬಗ್ಗೆ ತಿಳಿದಿದ್ದ ಮಾಸ್ಟರ್‌ ಬ್ಲಾಸ್ಟರ್‌ ಕೆಲ ಮಹತ್ವದ ಸಲಹೆಗಳನ್ನು ನೀಡುತ್ತಿರುವುದು ಕಂಡುಬಂದಿತು. ಅಂತೆಯೇ ಮುಂಬೈ ಪರ ಬೌಲಿಂಗ್‌ನಲ್ಲಿ ಇನಿಂಗ್ಸ್‌ ಆರಂಭಿಸಿದ ಎಡಗೈ ವೇಗಿ ಅರ್ಜುನ್‌ ತೆಂಡೂಲ್ಕರ್‌, ಮೊದಲ ಎರಡು ಓವರ್‌ಗಳಲ್ಲಿ 18 ರನ್‌ ಕೊಟ್ಟರು. ಹೊಸ ಚೆಂಡಿನಲ್ಲಿ ಉತ್ತಮ ಸ್ವಿಂಗ್‌ ತರುವ ಮೂಲಕ ಗಮನ ಸೆಳೆದರು.

ಮುಂಬೈನಿಂದ ಗೋವಾ ತಂಡಕ್ಕೆ
ದೇಶಿ ಕ್ರಿಕೆಟ್‌ನಲ್ಲಿ ಮುಂಬೈ ತಂಡದ ಪರ ಆಡಿದ್ದ ಅರ್ಜುನ್‌ ತೆಂಡೂಲ್ಕರ್‌, ನಂತರ ಅವಕಾಶ ಹುಡುಕಿಕೊಂಡು ಗೋವಾ ಕ್ರಿಕೆಟ್‌ ಸಂಸ್ಥೆ ತಂಡದ ಪರ ಆಡಲು ಮುಂದಾದರು. ಈವರೆಗೆ ತಲಾ 7 ರಣಜಿ ಟ್ರೋಫಿ ಕ್ರಿಕೆಟ್‌ ಮತ್ತು ಲಿಸ್ಟ್‌ ‘ಎ’ ಕ್ರಿಕೆಟ್‌ ಪಂದ್ಯಗಳನ್ನು ಆಡಿರುವ ಅರ್ಜುನ್‌, ಕ್ರಮವಾಗಿ 12 ಮತ್ತು 8 ವಿಕೆಟ್‌ಗಳನ್ನು ಪಡೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಆಡಿರುವ 9 ಪಂದ್ಯಗಳಲ್ಲಿ 12 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ 2021 ಟೂರ್ನಿ ಸಲುವಾಗಿ ನಡೆದ ಆಟಗಾರರ ಹರಾಜಿನಲ್ಲಿ ಅರ್ಜುನ್‌ ಮುಂಬೈ ಇಂಡಿಯನ್ಸ್‌ ಸೇರಿದ್ದರು, ಐಪಿಎಲ್‌ 2023 ಟೂರ್ನಿ ಸಲುವಾಗಿ ಮುಂಬೈ ತಂಡ ಹರಾಜಿನಲ್ಲಿ 30 ಲಕ್ಷ ರೂ. ನೀಡಿ ಅರ್ಜುನ್ ಸೇವೆಯನ್ನು ಮರಳಿ ತನ್ನದಾಗಿಸಿಕೊಂಡಿತ್ತು.

 

andolanait

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

8 mins ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

18 mins ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

34 mins ago

ಸಂಪಾದನೆ ಎಂಬ ಧರ್ಮ ಸಂಕಟಕ್ಕೆ ಸಿಲುಕಿ…

ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…

4 hours ago

ಪ್ರವಾಸಿಗರಿಗೆ ಮುಕ್ತವಾದ ಮಾಂದಲ್‌ಪಟ್ಟಿ

ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…

4 hours ago

ಯತೀಂದ್ರಗೆ ನಗರಾಭಿವೃದ್ಧಿ; ಮೈಸೂರಿಗೆ ಯೋಜನೆಗಳ ಸಮೃದ್ಧಿ?

ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…

4 hours ago