ಕ್ರೀಡೆ

ಕೊನೆಗೂ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಅರ್ಜುನ್ ತೆಂಡೂಲ್ಕರ್‌!

ಮುಂಬೈ : ಕ್ರಿಕೆಟ್‌ ಪ್ರಿಯರು ಬಹುಸಮಯ ಕಾತುರದಿಂದ ಎದುರು ನೋಡಿದ್ದ ದಿನ ಬಂದಾಗಿದ್ದು, ಬ್ಯಾಟಿಂಗ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 22ನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಎದುರು ಕಣಕ್ಕಿಳಿದ ಎಡಗೈ ವೇಗದ ಬೌಲರ್‌ 24 ವರ್ಷದ ಅರ್ಜುನ್‌ ತೆಂಡೂಲ್ಕರ್‌ ತಮ್ಮ ಐಪಿಎಲ್‌ ವೃತ್ತಿಬದುಕು ಆರಂಭಿಸಿದರು.‌

ರೋಹಿತ್‌ ಶರ್ಮಾ ಕ್ಯಾಪ್‌ ತೊಡಿಸಿದರು
ಆಟದ ಹೊರೆ ನಿರ್ವಹಣೆ ನಿಟ್ಟಿನಲ್ಲಿ ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮಾ ವಿಶ್ರಾಂತಿ ತೆಗೆದುಕೊಂಡರು. ಅವರ ಜಾಗದಲ್ಲಿ ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ಇನ್ನು ಮುಂಬೈ ಇಂಡಿಯನ್ಸ್‌ ತಂಡದ ಆಡುವ 11ರ ಬಳಗಕ್ಕೆ ಇಬ್ಬರು ಆಟಗಾರರು ಪದಾರ್ಪಣೆ ಮಾಡಿದರು. ರೋಹಿತ್‌ ಶರ್ಮಾ ಅವರಿಂದ ಕ್ಯಾಪ್‌ ಸ್ವೀಕರಿಸಿದ ಅರ್ಜುನ್‌ ತೆಂಡೂಲ್ಕರ್‌ ಮತ್ತು ದಕ್ಷಿಣ ಆಫ್ರಿಕಾದ ಎಡಗೈ ವೇಗದ ಬೌಲರ್‌ ಡುವಾನ್‌ ಯೆನ್ಸನ್‌ ಐಪಿಎಲ್‌ಗೆ ಪದಾರ್ಪಣೆ ಮಾಡಿದರು.

ಪಂದ್ಯಕ್ಕೂ ಮುನ್ನ ಆನ್‌ ಫೀಲ್ಡ್‌ನಲ್ಲಿ ಅರ್ಜುನ್‌ ತೆಂಡೂಲ್ಕರ್‌ ಮತ್ತು ಸಚಿನ್ ತೆಂಡೂಲ್ಕರ್‌ ಒಟ್ಟಾಗಿ ಕಾಣಿಸಿಕೊಂಡರು. ಪುತ್ರನ ಪದಾರ್ಪಣೆಯ ಬಗ್ಗೆ ತಿಳಿದಿದ್ದ ಮಾಸ್ಟರ್‌ ಬ್ಲಾಸ್ಟರ್‌ ಕೆಲ ಮಹತ್ವದ ಸಲಹೆಗಳನ್ನು ನೀಡುತ್ತಿರುವುದು ಕಂಡುಬಂದಿತು. ಅಂತೆಯೇ ಮುಂಬೈ ಪರ ಬೌಲಿಂಗ್‌ನಲ್ಲಿ ಇನಿಂಗ್ಸ್‌ ಆರಂಭಿಸಿದ ಎಡಗೈ ವೇಗಿ ಅರ್ಜುನ್‌ ತೆಂಡೂಲ್ಕರ್‌, ಮೊದಲ ಎರಡು ಓವರ್‌ಗಳಲ್ಲಿ 18 ರನ್‌ ಕೊಟ್ಟರು. ಹೊಸ ಚೆಂಡಿನಲ್ಲಿ ಉತ್ತಮ ಸ್ವಿಂಗ್‌ ತರುವ ಮೂಲಕ ಗಮನ ಸೆಳೆದರು.

ಮುಂಬೈನಿಂದ ಗೋವಾ ತಂಡಕ್ಕೆ
ದೇಶಿ ಕ್ರಿಕೆಟ್‌ನಲ್ಲಿ ಮುಂಬೈ ತಂಡದ ಪರ ಆಡಿದ್ದ ಅರ್ಜುನ್‌ ತೆಂಡೂಲ್ಕರ್‌, ನಂತರ ಅವಕಾಶ ಹುಡುಕಿಕೊಂಡು ಗೋವಾ ಕ್ರಿಕೆಟ್‌ ಸಂಸ್ಥೆ ತಂಡದ ಪರ ಆಡಲು ಮುಂದಾದರು. ಈವರೆಗೆ ತಲಾ 7 ರಣಜಿ ಟ್ರೋಫಿ ಕ್ರಿಕೆಟ್‌ ಮತ್ತು ಲಿಸ್ಟ್‌ ‘ಎ’ ಕ್ರಿಕೆಟ್‌ ಪಂದ್ಯಗಳನ್ನು ಆಡಿರುವ ಅರ್ಜುನ್‌, ಕ್ರಮವಾಗಿ 12 ಮತ್ತು 8 ವಿಕೆಟ್‌ಗಳನ್ನು ಪಡೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಆಡಿರುವ 9 ಪಂದ್ಯಗಳಲ್ಲಿ 12 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ 2021 ಟೂರ್ನಿ ಸಲುವಾಗಿ ನಡೆದ ಆಟಗಾರರ ಹರಾಜಿನಲ್ಲಿ ಅರ್ಜುನ್‌ ಮುಂಬೈ ಇಂಡಿಯನ್ಸ್‌ ಸೇರಿದ್ದರು, ಐಪಿಎಲ್‌ 2023 ಟೂರ್ನಿ ಸಲುವಾಗಿ ಮುಂಬೈ ತಂಡ ಹರಾಜಿನಲ್ಲಿ 30 ಲಕ್ಷ ರೂ. ನೀಡಿ ಅರ್ಜುನ್ ಸೇವೆಯನ್ನು ಮರಳಿ ತನ್ನದಾಗಿಸಿಕೊಂಡಿತ್ತು.

 

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago