ಕ್ರೀಡೆ

ಕೊನೆಗೂ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಅರ್ಜುನ್ ತೆಂಡೂಲ್ಕರ್‌!

ಮುಂಬೈ : ಕ್ರಿಕೆಟ್‌ ಪ್ರಿಯರು ಬಹುಸಮಯ ಕಾತುರದಿಂದ ಎದುರು ನೋಡಿದ್ದ ದಿನ ಬಂದಾಗಿದ್ದು, ಬ್ಯಾಟಿಂಗ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 22ನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಎದುರು ಕಣಕ್ಕಿಳಿದ ಎಡಗೈ ವೇಗದ ಬೌಲರ್‌ 24 ವರ್ಷದ ಅರ್ಜುನ್‌ ತೆಂಡೂಲ್ಕರ್‌ ತಮ್ಮ ಐಪಿಎಲ್‌ ವೃತ್ತಿಬದುಕು ಆರಂಭಿಸಿದರು.‌

ರೋಹಿತ್‌ ಶರ್ಮಾ ಕ್ಯಾಪ್‌ ತೊಡಿಸಿದರು
ಆಟದ ಹೊರೆ ನಿರ್ವಹಣೆ ನಿಟ್ಟಿನಲ್ಲಿ ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮಾ ವಿಶ್ರಾಂತಿ ತೆಗೆದುಕೊಂಡರು. ಅವರ ಜಾಗದಲ್ಲಿ ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ಇನ್ನು ಮುಂಬೈ ಇಂಡಿಯನ್ಸ್‌ ತಂಡದ ಆಡುವ 11ರ ಬಳಗಕ್ಕೆ ಇಬ್ಬರು ಆಟಗಾರರು ಪದಾರ್ಪಣೆ ಮಾಡಿದರು. ರೋಹಿತ್‌ ಶರ್ಮಾ ಅವರಿಂದ ಕ್ಯಾಪ್‌ ಸ್ವೀಕರಿಸಿದ ಅರ್ಜುನ್‌ ತೆಂಡೂಲ್ಕರ್‌ ಮತ್ತು ದಕ್ಷಿಣ ಆಫ್ರಿಕಾದ ಎಡಗೈ ವೇಗದ ಬೌಲರ್‌ ಡುವಾನ್‌ ಯೆನ್ಸನ್‌ ಐಪಿಎಲ್‌ಗೆ ಪದಾರ್ಪಣೆ ಮಾಡಿದರು.

ಪಂದ್ಯಕ್ಕೂ ಮುನ್ನ ಆನ್‌ ಫೀಲ್ಡ್‌ನಲ್ಲಿ ಅರ್ಜುನ್‌ ತೆಂಡೂಲ್ಕರ್‌ ಮತ್ತು ಸಚಿನ್ ತೆಂಡೂಲ್ಕರ್‌ ಒಟ್ಟಾಗಿ ಕಾಣಿಸಿಕೊಂಡರು. ಪುತ್ರನ ಪದಾರ್ಪಣೆಯ ಬಗ್ಗೆ ತಿಳಿದಿದ್ದ ಮಾಸ್ಟರ್‌ ಬ್ಲಾಸ್ಟರ್‌ ಕೆಲ ಮಹತ್ವದ ಸಲಹೆಗಳನ್ನು ನೀಡುತ್ತಿರುವುದು ಕಂಡುಬಂದಿತು. ಅಂತೆಯೇ ಮುಂಬೈ ಪರ ಬೌಲಿಂಗ್‌ನಲ್ಲಿ ಇನಿಂಗ್ಸ್‌ ಆರಂಭಿಸಿದ ಎಡಗೈ ವೇಗಿ ಅರ್ಜುನ್‌ ತೆಂಡೂಲ್ಕರ್‌, ಮೊದಲ ಎರಡು ಓವರ್‌ಗಳಲ್ಲಿ 18 ರನ್‌ ಕೊಟ್ಟರು. ಹೊಸ ಚೆಂಡಿನಲ್ಲಿ ಉತ್ತಮ ಸ್ವಿಂಗ್‌ ತರುವ ಮೂಲಕ ಗಮನ ಸೆಳೆದರು.

ಮುಂಬೈನಿಂದ ಗೋವಾ ತಂಡಕ್ಕೆ
ದೇಶಿ ಕ್ರಿಕೆಟ್‌ನಲ್ಲಿ ಮುಂಬೈ ತಂಡದ ಪರ ಆಡಿದ್ದ ಅರ್ಜುನ್‌ ತೆಂಡೂಲ್ಕರ್‌, ನಂತರ ಅವಕಾಶ ಹುಡುಕಿಕೊಂಡು ಗೋವಾ ಕ್ರಿಕೆಟ್‌ ಸಂಸ್ಥೆ ತಂಡದ ಪರ ಆಡಲು ಮುಂದಾದರು. ಈವರೆಗೆ ತಲಾ 7 ರಣಜಿ ಟ್ರೋಫಿ ಕ್ರಿಕೆಟ್‌ ಮತ್ತು ಲಿಸ್ಟ್‌ ‘ಎ’ ಕ್ರಿಕೆಟ್‌ ಪಂದ್ಯಗಳನ್ನು ಆಡಿರುವ ಅರ್ಜುನ್‌, ಕ್ರಮವಾಗಿ 12 ಮತ್ತು 8 ವಿಕೆಟ್‌ಗಳನ್ನು ಪಡೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಆಡಿರುವ 9 ಪಂದ್ಯಗಳಲ್ಲಿ 12 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ 2021 ಟೂರ್ನಿ ಸಲುವಾಗಿ ನಡೆದ ಆಟಗಾರರ ಹರಾಜಿನಲ್ಲಿ ಅರ್ಜುನ್‌ ಮುಂಬೈ ಇಂಡಿಯನ್ಸ್‌ ಸೇರಿದ್ದರು, ಐಪಿಎಲ್‌ 2023 ಟೂರ್ನಿ ಸಲುವಾಗಿ ಮುಂಬೈ ತಂಡ ಹರಾಜಿನಲ್ಲಿ 30 ಲಕ್ಷ ರೂ. ನೀಡಿ ಅರ್ಜುನ್ ಸೇವೆಯನ್ನು ಮರಳಿ ತನ್ನದಾಗಿಸಿಕೊಂಡಿತ್ತು.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago