ಬೆಂಗಳೂರು : ರಾಜ್ಯದ ಮೊದಲ ಅರ್ಜುನ ಪ್ರಶಸ್ತಿ ವಿಜೇತ ಕರ್ನಾಟಕದ ದಿಗ್ಗಜ ಅಥ್ಲಿಟ್ ಕೆನೆತ್ ಪೋವೆಲ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೆನೆತ್ ಪೋವೆಲ್ ಅವರು 1970ರಲ್ಲಿ ‘ಏಷ್ಯನ್ ಗೇಮ್ಸ್’ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು. 1960ರ ದಶದಕದಲ್ಲಿ ಕೆನೆತ್ ಪೋವೆಲ್ ಅವರು ಭಾರತ ಪ್ರಮುಖ ಓಟಗಾರರಲ್ಲಿ ಒಬ್ಬರೆನಿಸಿಕೊಂಡಿದ್ದರು. 1970ರ ಏಷ್ಯನ್ ಗೇಮ್ಸ್ನ 4x100m ರಿಲೆಯಲ್ಲಿ ಅವರು ಕಂಚಿನ ಪದಕ ಪಡೆದುಕೊಂಡಿದ್ದರು.
82 ವರ್ಷ ವಯಸ್ಸಿನ ಕೆನೆತ್ ಪೋವೆಲ್ ಅವರು, ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಳೆ ಮೈಸೂರು ಭಾಗದ ಪ್ರಪ್ರಥಮ ಕ್ರೀಡಾಪಟುವೂ ಹೌದು. ಕರ್ನಾಟಕಕ್ಕೆ ಅರ್ಜುನ ಪ್ರಶಸ್ತಿಯನ್ನು ತಂದುಕೊಟ್ಟ ಮೊದಲಿಗರೂ ಕೂಡ. ಭಾರತದ ಪರ ಅವರು ಅನೇಕ ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.
ಕೋಲಾರದ ಕೆಜಿಎಫ್ನಲ್ಲಿ ಜನಿಸಿದ ಕೆನೆತ್ ಅಣ್ಣಸ್ವಾಮಿ ಮೊದಲಿಯಾರ್ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದಿದ್ದರು. 1970ರ ವರೆಗೆ ಅವರು ಕ್ರೀಡಾ ರಂಗದಲ್ಲಿ ಸಕ್ರಿಯರಾಗಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…