ಕ್ರೀಡೆ

ಅರ್ಜುನ ಪ್ರಶಸ್ತಿ ವಿಜೇತ ಅಥ್ಲಿಟ್‌ ಕೆನೆತ್‌ ಪೋವಲ್‌ ಇನ್ನಿಲ್ಲ

ಬೆಂಗಳೂರು : ರಾಜ್ಯದ ಮೊದಲ ಅರ್ಜುನ ಪ್ರಶಸ್ತಿ ವಿಜೇತ ಕರ್ನಾಟಕದ ದಿಗ್ಗಜ ಅಥ್ಲಿಟ್‌ ಕೆನೆತ್‌ ಪೋವೆಲ್‌ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕೆನೆತ್‌ ಪೋವೆಲ್‌ ಅವರು 1970ರಲ್ಲಿ ‘ಏಷ್ಯನ್‌ ಗೇಮ್ಸ್‌’ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು. 1960ರ ದಶದಕದಲ್ಲಿ ಕೆನೆತ್‌ ಪೋವೆಲ್‌ ಅವರು ಭಾರತ ಪ್ರಮುಖ ಓಟಗಾರರಲ್ಲಿ ಒಬ್ಬರೆನಿಸಿಕೊಂಡಿದ್ದರು. 1970ರ ಏಷ್ಯನ್ ಗೇಮ್ಸ್‌ನ 4x100m ರಿಲೆಯಲ್ಲಿ ಅವರು ಕಂಚಿನ ಪದಕ ಪಡೆದುಕೊಂಡಿದ್ದರು.

82 ವರ್ಷ ವಯಸ್ಸಿನ ಕೆನೆತ್‌ ಪೋವೆಲ್‌ ಅವರು, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಳೆ ಮೈಸೂರು ಭಾಗದ ಪ್ರಪ್ರಥಮ ಕ್ರೀಡಾಪಟುವೂ ಹೌದು.  ಕರ್ನಾಟಕಕ್ಕೆ ಅರ್ಜುನ ಪ್ರಶಸ್ತಿಯನ್ನು ತಂದುಕೊಟ್ಟ ಮೊದಲಿಗರೂ ಕೂಡ. ಭಾರತದ ಪರ ಅವರು ಅನೇಕ ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

ಕೋಲಾರದ ಕೆಜಿಎಫ್‌ನಲ್ಲಿ ಜನಿಸಿದ ಕೆನೆತ್‌ ಅಣ್ಣಸ್ವಾಮಿ ಮೊದಲಿಯಾರ್ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದಿದ್ದರು. 1970ರ ವರೆಗೆ ಅವರು ಕ್ರೀಡಾ ರಂಗದಲ್ಲಿ ಸಕ್ರಿಯರಾಗಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago