ಕ್ರೀಡೆ

ಅರ್ಜುನ ಪ್ರಶಸ್ತಿ ವಿಜೇತ ಅಥ್ಲಿಟ್‌ ಕೆನೆತ್‌ ಪೋವಲ್‌ ಇನ್ನಿಲ್ಲ

ಬೆಂಗಳೂರು : ರಾಜ್ಯದ ಮೊದಲ ಅರ್ಜುನ ಪ್ರಶಸ್ತಿ ವಿಜೇತ ಕರ್ನಾಟಕದ ದಿಗ್ಗಜ ಅಥ್ಲಿಟ್‌ ಕೆನೆತ್‌ ಪೋವೆಲ್‌ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕೆನೆತ್‌ ಪೋವೆಲ್‌ ಅವರು 1970ರಲ್ಲಿ ‘ಏಷ್ಯನ್‌ ಗೇಮ್ಸ್‌’ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು. 1960ರ ದಶದಕದಲ್ಲಿ ಕೆನೆತ್‌ ಪೋವೆಲ್‌ ಅವರು ಭಾರತ ಪ್ರಮುಖ ಓಟಗಾರರಲ್ಲಿ ಒಬ್ಬರೆನಿಸಿಕೊಂಡಿದ್ದರು. 1970ರ ಏಷ್ಯನ್ ಗೇಮ್ಸ್‌ನ 4x100m ರಿಲೆಯಲ್ಲಿ ಅವರು ಕಂಚಿನ ಪದಕ ಪಡೆದುಕೊಂಡಿದ್ದರು.

82 ವರ್ಷ ವಯಸ್ಸಿನ ಕೆನೆತ್‌ ಪೋವೆಲ್‌ ಅವರು, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಳೆ ಮೈಸೂರು ಭಾಗದ ಪ್ರಪ್ರಥಮ ಕ್ರೀಡಾಪಟುವೂ ಹೌದು.  ಕರ್ನಾಟಕಕ್ಕೆ ಅರ್ಜುನ ಪ್ರಶಸ್ತಿಯನ್ನು ತಂದುಕೊಟ್ಟ ಮೊದಲಿಗರೂ ಕೂಡ. ಭಾರತದ ಪರ ಅವರು ಅನೇಕ ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

ಕೋಲಾರದ ಕೆಜಿಎಫ್‌ನಲ್ಲಿ ಜನಿಸಿದ ಕೆನೆತ್‌ ಅಣ್ಣಸ್ವಾಮಿ ಮೊದಲಿಯಾರ್ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದಿದ್ದರು. 1970ರ ವರೆಗೆ ಅವರು ಕ್ರೀಡಾ ರಂಗದಲ್ಲಿ ಸಕ್ರಿಯರಾಗಿದ್ದರು.

andolanait

Recent Posts

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

2 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

2 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

2 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

2 hours ago

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

12 hours ago