ಬೆಂಗಳೂರು : ರಾಜ್ಯದ ಮೊದಲ ಅರ್ಜುನ ಪ್ರಶಸ್ತಿ ವಿಜೇತ ಕರ್ನಾಟಕದ ದಿಗ್ಗಜ ಅಥ್ಲಿಟ್ ಕೆನೆತ್ ಪೋವೆಲ್ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೆನೆತ್ ಪೋವೆಲ್ ಅವರು 1970ರಲ್ಲಿ ‘ಏಷ್ಯನ್ ಗೇಮ್ಸ್’ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು. 1960ರ ದಶದಕದಲ್ಲಿ ಕೆನೆತ್ ಪೋವೆಲ್ ಅವರು ಭಾರತ ಪ್ರಮುಖ ಓಟಗಾರರಲ್ಲಿ ಒಬ್ಬರೆನಿಸಿಕೊಂಡಿದ್ದರು. 1970ರ ಏಷ್ಯನ್ ಗೇಮ್ಸ್ನ 4x100m ರಿಲೆಯಲ್ಲಿ ಅವರು ಕಂಚಿನ ಪದಕ ಪಡೆದುಕೊಂಡಿದ್ದರು.
82 ವರ್ಷ ವಯಸ್ಸಿನ ಕೆನೆತ್ ಪೋವೆಲ್ ಅವರು, ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಳೆ ಮೈಸೂರು ಭಾಗದ ಪ್ರಪ್ರಥಮ ಕ್ರೀಡಾಪಟುವೂ ಹೌದು. ಕರ್ನಾಟಕಕ್ಕೆ ಅರ್ಜುನ ಪ್ರಶಸ್ತಿಯನ್ನು ತಂದುಕೊಟ್ಟ ಮೊದಲಿಗರೂ ಕೂಡ. ಭಾರತದ ಪರ ಅವರು ಅನೇಕ ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.
ಕೋಲಾರದ ಕೆಜಿಎಫ್ನಲ್ಲಿ ಜನಿಸಿದ ಕೆನೆತ್ ಅಣ್ಣಸ್ವಾಮಿ ಮೊದಲಿಯಾರ್ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದಿದ್ದರು. 1970ರ ವರೆಗೆ ಅವರು ಕ್ರೀಡಾ ರಂಗದಲ್ಲಿ ಸಕ್ರಿಯರಾಗಿದ್ದರು.
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…