ಕ್ರೀಡೆ

ಅರ್ಜುನ ಪ್ರಶಸ್ತಿ ವಿಜೇತ ಅಥ್ಲಿಟ್‌ ಕೆನೆತ್‌ ಪೋವಲ್‌ ಇನ್ನಿಲ್ಲ

ಬೆಂಗಳೂರು : ರಾಜ್ಯದ ಮೊದಲ ಅರ್ಜುನ ಪ್ರಶಸ್ತಿ ವಿಜೇತ ಕರ್ನಾಟಕದ ದಿಗ್ಗಜ ಅಥ್ಲಿಟ್‌ ಕೆನೆತ್‌ ಪೋವೆಲ್‌ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕೆನೆತ್‌ ಪೋವೆಲ್‌ ಅವರು 1970ರಲ್ಲಿ ‘ಏಷ್ಯನ್‌ ಗೇಮ್ಸ್‌’ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು. 1960ರ ದಶದಕದಲ್ಲಿ ಕೆನೆತ್‌ ಪೋವೆಲ್‌ ಅವರು ಭಾರತ ಪ್ರಮುಖ ಓಟಗಾರರಲ್ಲಿ ಒಬ್ಬರೆನಿಸಿಕೊಂಡಿದ್ದರು. 1970ರ ಏಷ್ಯನ್ ಗೇಮ್ಸ್‌ನ 4x100m ರಿಲೆಯಲ್ಲಿ ಅವರು ಕಂಚಿನ ಪದಕ ಪಡೆದುಕೊಂಡಿದ್ದರು.

82 ವರ್ಷ ವಯಸ್ಸಿನ ಕೆನೆತ್‌ ಪೋವೆಲ್‌ ಅವರು, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಳೆ ಮೈಸೂರು ಭಾಗದ ಪ್ರಪ್ರಥಮ ಕ್ರೀಡಾಪಟುವೂ ಹೌದು.  ಕರ್ನಾಟಕಕ್ಕೆ ಅರ್ಜುನ ಪ್ರಶಸ್ತಿಯನ್ನು ತಂದುಕೊಟ್ಟ ಮೊದಲಿಗರೂ ಕೂಡ. ಭಾರತದ ಪರ ಅವರು ಅನೇಕ ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

ಕೋಲಾರದ ಕೆಜಿಎಫ್‌ನಲ್ಲಿ ಜನಿಸಿದ ಕೆನೆತ್‌ ಅಣ್ಣಸ್ವಾಮಿ ಮೊದಲಿಯಾರ್ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದಿದ್ದರು. 1970ರ ವರೆಗೆ ಅವರು ಕ್ರೀಡಾ ರಂಗದಲ್ಲಿ ಸಕ್ರಿಯರಾಗಿದ್ದರು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

45 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

3 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago