ಜೋಹಾನ್ಸ್ಬರ್ಗ್: ಭಾರತ ತಂಡದ ಅಮೋಘ ಬೌಲಿಂಗ್ ಮುಂದೆ ಮಂಕಾದ ಅತಿಥೇಯ ಸೌತ್ ಆಫ್ರಿಕಾ ತಂಡ 116 ರನ್ಗಳಿಸಿ ಆಲೌಟ್ ಆಗಿದೆ.
ಇಲ್ಲಿನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆರಂಭದಿಂದಲೇ ಕುಸಿತ ಕಂಡಿತು. ಟೀಂ ಇಂಡಿಯಾದ ಚುರುಕನ ಬೌಲಿಂಗ್ ಮುಂದೆ ಒದ್ದಾಡಿದ ದಕ್ಷಿಣ ಆಫ್ರಿಕಾ ತಂಡ ಎರಡನೇ ಓವರ್ನಲ್ಲಿಯೇ ವಿಕೆಟ್ ಕಳೆದುಕೊಂಡಿತು. ಆರಂಭದಿಂದಲೇ ಮಾರಕ ಬೌಲಿಂಗ್ ದಾಳಿ ನಡೆಸಿದ ಆರ್ಶ್ದೀಪ್ ಸಿಂಗ್ ತಮ್ಮ ಮೊಲದನೇ ಓವರ್ನಲ್ಲಿಯೇ ದ. ಆಫ್ರಿಕಾದ ಆರಂಭಿಕ ದಾಂಡಿಗ ರೀಝಾ ಹೆಂಡ್ರಿಕ್ಸ್ ಶೂನ್ಯಕ್ಕೆ ಔಟ್ ಮಾಡಿದರು.
ನಂತರ ಬಂದ ವ್ಯಾನ್ ಡುಸೆನ್ ಕೂಡಾ ಸೊನ್ನೆ ಸುತ್ತಿದರು. ಟೋನಿ ಡಿ ಜೋರ್ಜಿ 28 ರನ್ ಗಳಿಸಿದರು. ನಾಯಕ ಮಾರ್ಕ್ರಮ್ 12 ರನ್ ಗಳಿಸಿ ನಿರ್ಗಮಿಸಿದರು. ಭರವಸೆಯ ಆಟಗಾರ ಡೆವಿಡ್ ಮಿಲ್ಲರ್ ಎರಡು ರನ್ ಗಳಿಸಿ ಆವೇಶ್ ಖಾನ್ಗೆ ವಿಕೆಟ್ ಒಪ್ಪಿಸಿದರು. ಆಂಡಿಲೆ ಫೆಲುಕ್ವಾಯೊ 33 ರನ್ ಗಳಿಸಿದ್ದೇ ತಂಡದ ರ ವಯಕ್ತಿಕ ಗರಿಷ್ಠ ರನ್ ಆಗಿತ್ತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 27.3 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 116 ರನ್ಗಳ ಸಾಧಾರಣ ಗುರಿ ನೀಡಿತು.
ಟೀಂ ಇಂಡಿಯಾ ಪರ ಅಮೋಘ ಬೌಲಿಂಗ್ ದಾಳಿ ಮಾಡಿದ ಆರ್ಶ್ದೀಪ್ ಸಿಂಗ್ 10 ಓವರ್ಗಳಲ್ಲಿ 37 ರನ್ ನೀಡಿ 5 ವಿಕೆಟ್ ಪಡೆದರು. ಇದು ಅವರ ಏಕದಿನ ಕ್ರಿಕೆಟ್ನ ಮೊಲದ 5 ವಿಕೆಟ್ ಗೊಂಚಲಾಗಿದೆ. ಇವರಿಗೆ ಸಾಥ್ ನೀಡಿದ ಆವೇಶ್ ಖಾನ್ 27/4 ಮತ್ತು ಕಲ್ದೀಪ್ ಯಾದವ್ 3/1 ವಿಕೆಟ್ ಪಡೆದರು.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…