ಜೋಹಾನ್ಸ್ಬರ್ಗ್: ಭಾರತ ತಂಡದ ಅಮೋಘ ಬೌಲಿಂಗ್ ಮುಂದೆ ಮಂಕಾದ ಅತಿಥೇಯ ಸೌತ್ ಆಫ್ರಿಕಾ ತಂಡ 116 ರನ್ಗಳಿಸಿ ಆಲೌಟ್ ಆಗಿದೆ.
ಇಲ್ಲಿನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆರಂಭದಿಂದಲೇ ಕುಸಿತ ಕಂಡಿತು. ಟೀಂ ಇಂಡಿಯಾದ ಚುರುಕನ ಬೌಲಿಂಗ್ ಮುಂದೆ ಒದ್ದಾಡಿದ ದಕ್ಷಿಣ ಆಫ್ರಿಕಾ ತಂಡ ಎರಡನೇ ಓವರ್ನಲ್ಲಿಯೇ ವಿಕೆಟ್ ಕಳೆದುಕೊಂಡಿತು. ಆರಂಭದಿಂದಲೇ ಮಾರಕ ಬೌಲಿಂಗ್ ದಾಳಿ ನಡೆಸಿದ ಆರ್ಶ್ದೀಪ್ ಸಿಂಗ್ ತಮ್ಮ ಮೊಲದನೇ ಓವರ್ನಲ್ಲಿಯೇ ದ. ಆಫ್ರಿಕಾದ ಆರಂಭಿಕ ದಾಂಡಿಗ ರೀಝಾ ಹೆಂಡ್ರಿಕ್ಸ್ ಶೂನ್ಯಕ್ಕೆ ಔಟ್ ಮಾಡಿದರು.
ನಂತರ ಬಂದ ವ್ಯಾನ್ ಡುಸೆನ್ ಕೂಡಾ ಸೊನ್ನೆ ಸುತ್ತಿದರು. ಟೋನಿ ಡಿ ಜೋರ್ಜಿ 28 ರನ್ ಗಳಿಸಿದರು. ನಾಯಕ ಮಾರ್ಕ್ರಮ್ 12 ರನ್ ಗಳಿಸಿ ನಿರ್ಗಮಿಸಿದರು. ಭರವಸೆಯ ಆಟಗಾರ ಡೆವಿಡ್ ಮಿಲ್ಲರ್ ಎರಡು ರನ್ ಗಳಿಸಿ ಆವೇಶ್ ಖಾನ್ಗೆ ವಿಕೆಟ್ ಒಪ್ಪಿಸಿದರು. ಆಂಡಿಲೆ ಫೆಲುಕ್ವಾಯೊ 33 ರನ್ ಗಳಿಸಿದ್ದೇ ತಂಡದ ರ ವಯಕ್ತಿಕ ಗರಿಷ್ಠ ರನ್ ಆಗಿತ್ತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 27.3 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 116 ರನ್ಗಳ ಸಾಧಾರಣ ಗುರಿ ನೀಡಿತು.
ಟೀಂ ಇಂಡಿಯಾ ಪರ ಅಮೋಘ ಬೌಲಿಂಗ್ ದಾಳಿ ಮಾಡಿದ ಆರ್ಶ್ದೀಪ್ ಸಿಂಗ್ 10 ಓವರ್ಗಳಲ್ಲಿ 37 ರನ್ ನೀಡಿ 5 ವಿಕೆಟ್ ಪಡೆದರು. ಇದು ಅವರ ಏಕದಿನ ಕ್ರಿಕೆಟ್ನ ಮೊಲದ 5 ವಿಕೆಟ್ ಗೊಂಚಲಾಗಿದೆ. ಇವರಿಗೆ ಸಾಥ್ ನೀಡಿದ ಆವೇಶ್ ಖಾನ್ 27/4 ಮತ್ತು ಕಲ್ದೀಪ್ ಯಾದವ್ 3/1 ವಿಕೆಟ್ ಪಡೆದರು.
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…