ಜೋಹಾನ್ಸ್ಬರ್ಗ್: ಭಾರತ ತಂಡದ ಅಮೋಘ ಬೌಲಿಂಗ್ ಮುಂದೆ ಮಂಕಾದ ಅತಿಥೇಯ ಸೌತ್ ಆಫ್ರಿಕಾ ತಂಡ 116 ರನ್ಗಳಿಸಿ ಆಲೌಟ್ ಆಗಿದೆ.
ಇಲ್ಲಿನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆರಂಭದಿಂದಲೇ ಕುಸಿತ ಕಂಡಿತು. ಟೀಂ ಇಂಡಿಯಾದ ಚುರುಕನ ಬೌಲಿಂಗ್ ಮುಂದೆ ಒದ್ದಾಡಿದ ದಕ್ಷಿಣ ಆಫ್ರಿಕಾ ತಂಡ ಎರಡನೇ ಓವರ್ನಲ್ಲಿಯೇ ವಿಕೆಟ್ ಕಳೆದುಕೊಂಡಿತು. ಆರಂಭದಿಂದಲೇ ಮಾರಕ ಬೌಲಿಂಗ್ ದಾಳಿ ನಡೆಸಿದ ಆರ್ಶ್ದೀಪ್ ಸಿಂಗ್ ತಮ್ಮ ಮೊಲದನೇ ಓವರ್ನಲ್ಲಿಯೇ ದ. ಆಫ್ರಿಕಾದ ಆರಂಭಿಕ ದಾಂಡಿಗ ರೀಝಾ ಹೆಂಡ್ರಿಕ್ಸ್ ಶೂನ್ಯಕ್ಕೆ ಔಟ್ ಮಾಡಿದರು.
ನಂತರ ಬಂದ ವ್ಯಾನ್ ಡುಸೆನ್ ಕೂಡಾ ಸೊನ್ನೆ ಸುತ್ತಿದರು. ಟೋನಿ ಡಿ ಜೋರ್ಜಿ 28 ರನ್ ಗಳಿಸಿದರು. ನಾಯಕ ಮಾರ್ಕ್ರಮ್ 12 ರನ್ ಗಳಿಸಿ ನಿರ್ಗಮಿಸಿದರು. ಭರವಸೆಯ ಆಟಗಾರ ಡೆವಿಡ್ ಮಿಲ್ಲರ್ ಎರಡು ರನ್ ಗಳಿಸಿ ಆವೇಶ್ ಖಾನ್ಗೆ ವಿಕೆಟ್ ಒಪ್ಪಿಸಿದರು. ಆಂಡಿಲೆ ಫೆಲುಕ್ವಾಯೊ 33 ರನ್ ಗಳಿಸಿದ್ದೇ ತಂಡದ ರ ವಯಕ್ತಿಕ ಗರಿಷ್ಠ ರನ್ ಆಗಿತ್ತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 27.3 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 116 ರನ್ಗಳ ಸಾಧಾರಣ ಗುರಿ ನೀಡಿತು.
ಟೀಂ ಇಂಡಿಯಾ ಪರ ಅಮೋಘ ಬೌಲಿಂಗ್ ದಾಳಿ ಮಾಡಿದ ಆರ್ಶ್ದೀಪ್ ಸಿಂಗ್ 10 ಓವರ್ಗಳಲ್ಲಿ 37 ರನ್ ನೀಡಿ 5 ವಿಕೆಟ್ ಪಡೆದರು. ಇದು ಅವರ ಏಕದಿನ ಕ್ರಿಕೆಟ್ನ ಮೊಲದ 5 ವಿಕೆಟ್ ಗೊಂಚಲಾಗಿದೆ. ಇವರಿಗೆ ಸಾಥ್ ನೀಡಿದ ಆವೇಶ್ ಖಾನ್ 27/4 ಮತ್ತು ಕಲ್ದೀಪ್ ಯಾದವ್ 3/1 ವಿಕೆಟ್ ಪಡೆದರು.
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…