ಕ್ರೀಡೆ

ಆರ್ಶ್‌ದೀಪ್‌, ಆವೇಶ್‌ ದಾಳಿಗೆ ತತ್ತರಿಸಿದ ಹರಿಣ ಪಡೆ: ಭಾರತಕ್ಕೆ 117 ಟಾರ್ಗೆಟ್‌

ಜೋಹಾನ್ಸ್‌ಬರ್ಗ್: ಭಾರತ ತಂಡದ ಅಮೋಘ ಬೌಲಿಂಗ್‌ ಮುಂದೆ ಮಂಕಾದ ಅತಿಥೇಯ ಸೌತ್‌ ಆಫ್ರಿಕಾ ತಂಡ 116 ರನ್‌ಗಳಿಸಿ ಆಲೌಟ್‌ ಆಗಿದೆ.

ಇಲ್ಲಿನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆರಂಭದಿಂದಲೇ ಕುಸಿತ ಕಂಡಿತು. ಟೀಂ ಇಂಡಿಯಾದ ಚುರುಕನ ಬೌಲಿಂಗ್‌ ಮುಂದೆ ಒದ್ದಾಡಿದ ದಕ್ಷಿಣ ಆಫ್ರಿಕಾ ತಂಡ ಎರಡನೇ ಓವರ್‌ನಲ್ಲಿಯೇ ವಿಕೆಟ್‌ ಕಳೆದುಕೊಂಡಿತು. ಆರಂಭದಿಂದಲೇ ಮಾರಕ ಬೌಲಿಂಗ್‌ ದಾಳಿ ನಡೆಸಿದ ಆರ್ಶ್‌ದೀಪ್‌ ಸಿಂಗ್‌ ತಮ್ಮ ಮೊಲದನೇ ಓವರ್‌ನಲ್ಲಿಯೇ ದ. ಆಫ್ರಿಕಾದ ಆರಂಭಿಕ ದಾಂಡಿಗ ರೀಝಾ ಹೆಂಡ್ರಿಕ್ಸ್‌ ಶೂನ್ಯಕ್ಕೆ ಔಟ್‌ ಮಾಡಿದರು.

ನಂತರ ಬಂದ ವ್ಯಾನ್‌ ಡುಸೆನ್‌ ಕೂಡಾ ಸೊನ್ನೆ ಸುತ್ತಿದರು. ಟೋನಿ ಡಿ ಜೋರ್ಜಿ 28 ರನ್‌ ಗಳಿಸಿದರು. ನಾಯಕ ಮಾರ್ಕ್ರಮ್‌ 12 ರನ್‌ ಗಳಿಸಿ ನಿರ್ಗಮಿಸಿದರು. ಭರವಸೆಯ ಆಟಗಾರ ಡೆವಿಡ್‌ ಮಿಲ್ಲರ್‌ ಎರಡು ರನ್‌ ಗಳಿಸಿ ಆವೇಶ್‌ ಖಾನ್‌ಗೆ ವಿಕೆಟ್‌ ಒಪ್ಪಿಸಿದರು. ಆಂಡಿಲೆ ಫೆಲುಕ್ವಾಯೊ 33 ರನ್‌ ಗಳಿಸಿದ್ದೇ ತಂಡದ ರ ವಯಕ್ತಿಕ ಗರಿಷ್ಠ ರನ್‌ ಆಗಿತ್ತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 27.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 116 ರನ್‌ಗಳ ಸಾಧಾರಣ ಗುರಿ ನೀಡಿತು.

ಟೀಂ ಇಂಡಿಯಾ ಪರ ಅಮೋಘ ಬೌಲಿಂಗ್‌ ದಾಳಿ ಮಾಡಿದ ಆರ್ಶ್‌ದೀಪ್‌ ಸಿಂಗ್‌ 10 ಓವರ್‌ಗಳಲ್ಲಿ 37 ರನ್‌ ನೀಡಿ 5 ವಿಕೆಟ್‌ ಪಡೆದರು. ಇದು ಅವರ ಏಕದಿನ ಕ್ರಿಕೆಟ್‌ನ ಮೊಲದ 5 ವಿಕೆಟ್‌ ಗೊಂಚಲಾಗಿದೆ. ಇವರಿಗೆ ಸಾಥ್‌ ನೀಡಿದ ಆವೇಶ್‌ ಖಾನ್‌ 27/4 ಮತ್ತು ಕಲ್ದೀಪ್‌ ಯಾದವ್‌ 3/1 ವಿಕೆಟ್‌ ಪಡೆದರು.

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

6 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

7 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

8 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

8 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

10 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

13 hours ago