ಜೋಹಾನ್ಸ್ಬರ್ಗ್: ಭಾರತ ತಂಡದ ಅಮೋಘ ಬೌಲಿಂಗ್ ಮುಂದೆ ಮಂಕಾದ ಅತಿಥೇಯ ಸೌತ್ ಆಫ್ರಿಕಾ ತಂಡ 116 ರನ್ಗಳಿಸಿ ಆಲೌಟ್ ಆಗಿದೆ.
ಇಲ್ಲಿನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆರಂಭದಿಂದಲೇ ಕುಸಿತ ಕಂಡಿತು. ಟೀಂ ಇಂಡಿಯಾದ ಚುರುಕನ ಬೌಲಿಂಗ್ ಮುಂದೆ ಒದ್ದಾಡಿದ ದಕ್ಷಿಣ ಆಫ್ರಿಕಾ ತಂಡ ಎರಡನೇ ಓವರ್ನಲ್ಲಿಯೇ ವಿಕೆಟ್ ಕಳೆದುಕೊಂಡಿತು. ಆರಂಭದಿಂದಲೇ ಮಾರಕ ಬೌಲಿಂಗ್ ದಾಳಿ ನಡೆಸಿದ ಆರ್ಶ್ದೀಪ್ ಸಿಂಗ್ ತಮ್ಮ ಮೊಲದನೇ ಓವರ್ನಲ್ಲಿಯೇ ದ. ಆಫ್ರಿಕಾದ ಆರಂಭಿಕ ದಾಂಡಿಗ ರೀಝಾ ಹೆಂಡ್ರಿಕ್ಸ್ ಶೂನ್ಯಕ್ಕೆ ಔಟ್ ಮಾಡಿದರು.
ನಂತರ ಬಂದ ವ್ಯಾನ್ ಡುಸೆನ್ ಕೂಡಾ ಸೊನ್ನೆ ಸುತ್ತಿದರು. ಟೋನಿ ಡಿ ಜೋರ್ಜಿ 28 ರನ್ ಗಳಿಸಿದರು. ನಾಯಕ ಮಾರ್ಕ್ರಮ್ 12 ರನ್ ಗಳಿಸಿ ನಿರ್ಗಮಿಸಿದರು. ಭರವಸೆಯ ಆಟಗಾರ ಡೆವಿಡ್ ಮಿಲ್ಲರ್ ಎರಡು ರನ್ ಗಳಿಸಿ ಆವೇಶ್ ಖಾನ್ಗೆ ವಿಕೆಟ್ ಒಪ್ಪಿಸಿದರು. ಆಂಡಿಲೆ ಫೆಲುಕ್ವಾಯೊ 33 ರನ್ ಗಳಿಸಿದ್ದೇ ತಂಡದ ರ ವಯಕ್ತಿಕ ಗರಿಷ್ಠ ರನ್ ಆಗಿತ್ತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 27.3 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 116 ರನ್ಗಳ ಸಾಧಾರಣ ಗುರಿ ನೀಡಿತು.
ಟೀಂ ಇಂಡಿಯಾ ಪರ ಅಮೋಘ ಬೌಲಿಂಗ್ ದಾಳಿ ಮಾಡಿದ ಆರ್ಶ್ದೀಪ್ ಸಿಂಗ್ 10 ಓವರ್ಗಳಲ್ಲಿ 37 ರನ್ ನೀಡಿ 5 ವಿಕೆಟ್ ಪಡೆದರು. ಇದು ಅವರ ಏಕದಿನ ಕ್ರಿಕೆಟ್ನ ಮೊಲದ 5 ವಿಕೆಟ್ ಗೊಂಚಲಾಗಿದೆ. ಇವರಿಗೆ ಸಾಥ್ ನೀಡಿದ ಆವೇಶ್ ಖಾನ್ 27/4 ಮತ್ತು ಕಲ್ದೀಪ್ ಯಾದವ್ 3/1 ವಿಕೆಟ್ ಪಡೆದರು.
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…