ಕ್ರೀಡೆ

ಆರ್ಶ್‌ದೀಪ್‌, ಆವೇಶ್‌ ದಾಳಿಗೆ ತತ್ತರಿಸಿದ ಹರಿಣ ಪಡೆ: ಭಾರತಕ್ಕೆ 117 ಟಾರ್ಗೆಟ್‌

ಜೋಹಾನ್ಸ್‌ಬರ್ಗ್: ಭಾರತ ತಂಡದ ಅಮೋಘ ಬೌಲಿಂಗ್‌ ಮುಂದೆ ಮಂಕಾದ ಅತಿಥೇಯ ಸೌತ್‌ ಆಫ್ರಿಕಾ ತಂಡ 116 ರನ್‌ಗಳಿಸಿ ಆಲೌಟ್‌ ಆಗಿದೆ.

ಇಲ್ಲಿನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆರಂಭದಿಂದಲೇ ಕುಸಿತ ಕಂಡಿತು. ಟೀಂ ಇಂಡಿಯಾದ ಚುರುಕನ ಬೌಲಿಂಗ್‌ ಮುಂದೆ ಒದ್ದಾಡಿದ ದಕ್ಷಿಣ ಆಫ್ರಿಕಾ ತಂಡ ಎರಡನೇ ಓವರ್‌ನಲ್ಲಿಯೇ ವಿಕೆಟ್‌ ಕಳೆದುಕೊಂಡಿತು. ಆರಂಭದಿಂದಲೇ ಮಾರಕ ಬೌಲಿಂಗ್‌ ದಾಳಿ ನಡೆಸಿದ ಆರ್ಶ್‌ದೀಪ್‌ ಸಿಂಗ್‌ ತಮ್ಮ ಮೊಲದನೇ ಓವರ್‌ನಲ್ಲಿಯೇ ದ. ಆಫ್ರಿಕಾದ ಆರಂಭಿಕ ದಾಂಡಿಗ ರೀಝಾ ಹೆಂಡ್ರಿಕ್ಸ್‌ ಶೂನ್ಯಕ್ಕೆ ಔಟ್‌ ಮಾಡಿದರು.

ನಂತರ ಬಂದ ವ್ಯಾನ್‌ ಡುಸೆನ್‌ ಕೂಡಾ ಸೊನ್ನೆ ಸುತ್ತಿದರು. ಟೋನಿ ಡಿ ಜೋರ್ಜಿ 28 ರನ್‌ ಗಳಿಸಿದರು. ನಾಯಕ ಮಾರ್ಕ್ರಮ್‌ 12 ರನ್‌ ಗಳಿಸಿ ನಿರ್ಗಮಿಸಿದರು. ಭರವಸೆಯ ಆಟಗಾರ ಡೆವಿಡ್‌ ಮಿಲ್ಲರ್‌ ಎರಡು ರನ್‌ ಗಳಿಸಿ ಆವೇಶ್‌ ಖಾನ್‌ಗೆ ವಿಕೆಟ್‌ ಒಪ್ಪಿಸಿದರು. ಆಂಡಿಲೆ ಫೆಲುಕ್ವಾಯೊ 33 ರನ್‌ ಗಳಿಸಿದ್ದೇ ತಂಡದ ರ ವಯಕ್ತಿಕ ಗರಿಷ್ಠ ರನ್‌ ಆಗಿತ್ತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 27.3 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 116 ರನ್‌ಗಳ ಸಾಧಾರಣ ಗುರಿ ನೀಡಿತು.

ಟೀಂ ಇಂಡಿಯಾ ಪರ ಅಮೋಘ ಬೌಲಿಂಗ್‌ ದಾಳಿ ಮಾಡಿದ ಆರ್ಶ್‌ದೀಪ್‌ ಸಿಂಗ್‌ 10 ಓವರ್‌ಗಳಲ್ಲಿ 37 ರನ್‌ ನೀಡಿ 5 ವಿಕೆಟ್‌ ಪಡೆದರು. ಇದು ಅವರ ಏಕದಿನ ಕ್ರಿಕೆಟ್‌ನ ಮೊಲದ 5 ವಿಕೆಟ್‌ ಗೊಂಚಲಾಗಿದೆ. ಇವರಿಗೆ ಸಾಥ್‌ ನೀಡಿದ ಆವೇಶ್‌ ಖಾನ್‌ 27/4 ಮತ್ತು ಕಲ್ದೀಪ್‌ ಯಾದವ್‌ 3/1 ವಿಕೆಟ್‌ ಪಡೆದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

15 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

16 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

17 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

18 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

23 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

23 hours ago