ನವದೆಹಲಿ: ಲಾರ್ಡ್ಸ್ ನಲ್ಲಿ ನಡೆದ ಆಶಸ್ ಸರಣಿಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿನ ಇಂಗ್ಲೆಂಡ್ ಬ್ಯಾಟ್ಸ್ಮನ್ ಜಾನಿ ಬೈರ್ಸ್ಟೋವ್ ಔಟಾದ ತೀರ್ಪು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಈ ಪ್ರಕರಣ ಮತ್ತೊಂದು ಮಜುಲನ್ನು ಪಡೆದುಕೊಂಡಿದೆ.
ಈ ಪ್ರಕರಣದಲ್ಲಿ ಬೆನ್ ಸ್ಟೋಕ್ಸ್ ತಂಡವನ್ನು ಬೆಂಬಲಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಇದು ಕ್ರೀಡಾಸ್ಪೂರ್ತಿಗೆ ವಿರುದ್ಧವಾಗಿದೆ ಎಂದು ಹೇಳಿದ್ದರು. ಬ್ರಿಟನ್ ಪ್ರಧಾನಿ ಆಸ್ಟ್ರೇಲಿಯ ತಂಡದ ಈ ನಡೆ ಕ್ರೀಡಾಮನೋಭಾವಕ್ಕೆ ವಿರುದ್ಧವಾಗಿದೆ. ‘ಆಸ್ಟ್ರೇಲಿಯಾ ಪಂದ್ಯವನ್ನು ಗೆದ್ದ ರೀತಿಯಲ್ಲಿ ಎಂದಿಗೂ ಗೆಲ್ಲಲು ಬಯಸುವುದಿಲ್ಲ ಎಂದು ಹೇಳಿದ ಬೆನ್ ಸ್ಟೋಕ್ಸ್ಗೆ ಈ ವಿಷಯದಲ್ಲಿ ಪ್ರಧಾನಿ ಸುನಕ್ ಸಹಮತ ವ್ಯಕ್ತಪಡಿಸಿದ್ದಾರೆ.
ಬ್ರಿಟನ್ ಪ್ರಧಾನಿ ಹೇಳಿಕೆ ಬೆನ್ನಲ್ಲೇ ಆಸ್ಟ್ರೇಲಿಯಾದ ಪಿಎಂ ಆಂಥೋನಿ ಅಲ್ಬನೀಸ್ ಕೂಡ ತಿರುಗೇಟು ನೀಡಿದ್ದಾರೆ. ಬ್ರಿಟನ್ನ ಪಿಎಂ ಸುನಕ್ ಅವರಂತೆ ಕ್ರಿಕೆಟ್ ಅನ್ನು ಇಷ್ಟಪಡುವ ಅಲ್ಬನೀಸ್, ಇಂಗ್ಲೆಂಡ್ ವಿರುದ್ಧ ತಮ್ಮ ಆಶಸ್ ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳ ಬಗ್ಗೆ ನನಗೆ ಹೆಮ್ಮೆ ಇದೆ. ಆಶಿಸ್ ಸರಣಿ ಗೆದ್ದು ವಿಜಯಶಾಲಿಯಾಗಿ ಮನೆಗೆ ಹಿಂದಿರುಗುವವರನ್ನು ಸ್ವಾಗತಿಸಲು ಎದುರುನೋಡುತ್ತೇನೆ ಎಂದು ಹೇಳಿದ್ದಾರೆ.
ಟೆಸ್ಟ್ನ ಕೊನೆಯ ದಿನದಂದು ಬೇರ್ಸ್ಟೋವ್ ಅವರನ್ನು ಆಸ್ಟ್ರೇಲಿಯಾದ ವಿಕೆಟ್ಕೀಪರ್ ಅಲೆಕ್ಸ್ ಕ್ಯಾರಿ ಔಟ್ ಮಾಡಿದ ರೀತಿಯನ್ನು ಇಂಗ್ಲಿಷ್ ತಂಡದ ನಾಯಕ ಬೆನ್ ಸ್ಟೋಕ್ಸ್ ಸೇರಿದಂತೆ ಅನೇಕ ಕ್ರಿಕೆಟ್ ದಿಗ್ಗಜರು ಟೀಕಿಸಿದರು. ಇದು ಅವರ ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿದೆ. ಈ ರೀತಿಯ ಪಂದ್ಯವನ್ನು ಗೆಲ್ಲಲು ನಾನು ಎಂದಿಗೂ ಬಯಸುವುದಿಲ್ಲ ಎಂದು ಸ್ಟೋಕ್ಸ್ ಹೇಳಿದ್ದರು. ಬ್ರಿಟನ್ನ ಭಾರತೀಯ ಮೂಲದ ಪ್ರಧಾನಿ ರಿಷಿ ಸುನಕ್ ಈ ವಿಷಯದ ಬಗ್ಗೆ ಸ್ಟೋಕ್ಸ್ ಪರವಾಗಿ ನಿಂತರು. ಆಶಸ್ನ ಎರಡನೇ ಟೆಸ್ಟ್ ಪಂದ್ಯ ವೀಕ್ಷಿಸಲು ಸುನಕ್ ಶನಿವಾರ ಲಾರ್ಡ್ಸ್ ಮೈದಾನಕ್ಕೆ ಆಗಮಿಸಿದ್ದರು.
ಉಭಯ ದೇಶಗಳ ಆಟಗಾರರ ನಡುವೆ ವೈಮನಸ್ಸು ಕಂಡು ಬಂತು. ಬೈರ್ಸ್ಟೋವ್ ಔಟಾದ ಈ ಘಟನೆಯ ನಂತರ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಆಟಗಾರರ ಸಂಬಂಧದಲ್ಲಿ ಹದಗೆಟ್ಟಿತ್ತು. ಇಂಗ್ಲೆಂಡ್ನ ಸ್ಟುವರ್ಟ್ ಬ್ರಾಡ್ ಕೂಡ ಅಲೆಕ್ಸ್ ಕ್ಯಾರಿ ಅವರೊಂದಿಗೆ ವಾಗ್ವಾದ ನಡೆಸಿದ್ದರು. ಅಷ್ಟೇ ಅಲ್ಲದೆ ಬ್ರಾಡ್ ತನ್ನ ಕೋಪವನ್ನು ಕ್ಯಾರಿಯ ಮೇಲೆ ಮಾತ್ರವಲ್ಲದೆ ಆಸ್ಟ್ರೇಲಿಯಾದ ನಾಯಕನ ಮೇಲೂ ಹೊರಹಾಕಿದರು. ಕ್ರಿಕೆಟ್ನಲ್ಲಿ ಇದಕ್ಕಿಂತ ಕೆಟ್ಟದ್ದನ್ನು ನಾನು ನೋಡಿಲ್ಲ ಎಂದು ಹೇಳಿದ್ದರು.
ಬ್ಯಾಟಿಂಗ್ ವೇಳೆ ಬೈರ್ಸ್ಟೋವ್ ಕ್ರೀಸ್ನಿಂದ ಹೊರಬಂದರು. ಈ ವೇಳೆ ಕೆರ್ರಿ ಸ್ಟಂಪ್ ಮಾಡಿದರು. ಲಾರ್ಡ್ಸ್ ಟೆಸ್ಟ್ ನಲ್ಲಿ ಇಂಗ್ಲೆಂಡ್ ಗೆಲುವಿಗೆ 371 ರನ್ ಗಳ ಗುರಿ ಹೊಂದಿತ್ತು. ಕೊನೆಯ ದಿನ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಬೆನ್ ಡಕೆಟ್ ರೂಪದಲ್ಲಿ ಮೊದಲ ಪೆಟ್ಟು ಬಿದ್ದು ಜಾನಿ ಬೈರ್ ಸ್ಟೋವ್ ಬ್ಯಾಟಿಂಗ್ ಗೆ ಇಳಿದರು. ಕ್ಯಾಮರೂನ್ ಗ್ರೀನ್ ಅವರ ಚೆಂಡನ್ನು ಆಡಿದ ನಂತರ, ಇನ್ನೊಂದು ತುದಿಯಲ್ಲಿ ನಾಯಕ ಬೆನ್ ಸ್ಟೋಕ್ಸ್ ಅವರೊಂದಿಗೆ ಮಾತನಾಡಲು ಕ್ರಿಸ್ ನಿಂದ ಹೊರಬಂದರು. ಈ ವೇಳೆ ವಿಕೆಟ್ ಕೀಪರ್ ಕ್ಯಾರಿ ಎಸೆದ ಚೆಂಡು ಸ್ಟಂಪ್ ಗೆ ಬಡಿಯಿತು. ಇದಾದ ನಂತರ ಆಸ್ಟ್ರೇಲಿಯ ತಂಡ ಔಟ್ ಗೆ ಮನವಿ ಮಾಡಿತು. ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರಿಂದ ಬೈರ್ಸ್ಟೋವ್ ಪೆವಿಲಿಯನ್ಗೆ ಮರಳಬೇಕಾಯಿತು. ಆಗ ಮೈದಾನದಲ್ಲಿದ್ದ ಪ್ರೇಕ್ಷಕರು ಆಸ್ಟ್ರೇಲಿಯ ತಂಡದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…