ಮ್ಯಾಂಚೆಸ್ಟರ್: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ಇಲ್ಲಿನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಬುಧವಾರ ಆರಂಭವಾದ ಆಷಸ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಂಗ್ಲ ವೇಗಿ ಸ್ಟುವರ್ಟ್ ಬ್ರಾಡ್ ವಿಶೇಷ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 600 ವಿಕೆಟ್ಗಳನ್ನು ಬ್ರಾಡ್ ಪೂರ್ಣಗೊಳಿಸಿದ್ದಾರೆ.
ಟಾಸ್ ಗೆದ್ದು ಎದುರಾಳಿ ಆಸ್ಟ್ರೇಲಿಯಾ ತಂಡವನ್ನು ಮೊದಲ ಬ್ಯಾಟಿಂಗ್ಗೆ ಆಹ್ವಾನಿಸಿದ ಇಂಗ್ಲೆಂಡ್ ತಂಡದ ಪರ ಹೊಸ ಚೆಂಡಿನಲ್ಲಿ ಬೌಲ್ ಮಾಡಿದ ಸ್ಟುವರ್ಟ್ ಬ್ರಾಡ್ ಅವರು ತಮ್ಮ 5ನೇ ಓವರ್ನಲ್ಲಿ ಉಸ್ಮಾನ್ ಖವಾಜ ಅವರನ್ನು ಔಟ್ ಮಾಡಿದ್ದರು. ನಂತರ 48 ರನ್ ಗಳಿಸಿ ಕ್ರೀಸ್ನಲ್ಲಿ ನೆಲೆಯೂರಿದ್ದ ಟ್ರಾವಿಸ್ ಹೆಡ್ ಅವರಿಗೆ ಪೆವಿಲಿಯನ್ ಹಾದಿ ತೋರಿಸಿದ್ದರು. ಹೆಡ್ ವಿಕೆಟ್ ಪಡೆಯುತ್ತಿದ್ದಂತೆ ಸ್ಟುವರ್ಟ್ ಬ್ರಾಡ್ ಅವರು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ನಲ್ಲಿ 600 ವಿಕೆಟ್ಗಳ ಸಾಧನೆ ಮಾಡಿದರು.
ಹಿರಿಯ ವೇಗಿ ಜೇಮ್ಸ್ ಆಂಡರ್ಸನ್ ಅವರ ಬಳಿಕ ಟೆಸ್ಟ್ ಕ್ರಿಕೆಟ್ನಲ್ಲಿ 600 ವಿಕೆಟ್ಗಳನ್ನು ಪಡೆದ ಎರಡನೇ ಇಂಗ್ಲೆಂಡ್ ವೇಗಿ ಎಂಬ ದಾಖಲೆಯನ್ನು ಸ್ಟುವರ್ಟ್ ಬ್ರಾಡ್ ಬರೆದಿದ್ದಾರೆ. ಒಟ್ಟಾರೆ ದೀರ್ಘಾವಧಿ ಸ್ವರೂಪದಲ್ಲಿ 600 ವಿಕೆಟ್ಗಳ ಸಾಧನೆ ಮಾಡಿದ ವಿಶ್ವದ ಐದನೇ ಬೌಲರ್ ಎಂಬ ಸಾಧನೆಗೆ ಬ್ರಾಡ್ ಭಾಜನರಾಗಿದ್ದಾರೆ.
ಮುತ್ತಯ್ಯ ಮುರಳಿಧರನ್: 800 ವಿಕೆಟ್ಗಳು (133 ಟೆಸ್ಟ್ಗಳು)
ಶೇನ್ ವಾರ್ನ್: 708 ವಿಕೆಟ್ಗಳು (145 ಟೆಸ್ಟ್ಗಳು)
ಜೇಮ್ಸ್ ಆಂಡರ್ಸನ್: 688 ವಿಕೆಟ್ಗಳು (182 ಟೆಸ್ಟ್ಗಳು)
ಅನಿಲ್ ಕುಂಬ್ಳೆ: 619 ವಿಕೆಟ್ಗಳು (132 ಟೆಸ್ಟ್ಗಳು)
ಸ್ಟುವರ್ಟ್ ಬ್ರಾಡ್: 600* ವಿಕೆಟ್ಗಳು (166 ಟೆಸ್ಟ್ಗಳು)
ಆಸ್ಟ್ರೇಲಿಯಾ ಮಾಜಿ ಸ್ಪಿನ್ನರ್ ಹಾಗೂ ದಿವಂಗತ ಶೇನ್ವಾರ್ನ್ ಅವರು 2005ರಲ್ಲಿ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿಯೇ 600 ಟೆಸ್ಟ್ ವಿಕೆಟ್ಗಳನ್ನು ಪೂರ್ಣಗೊಳಿಸಿದ್ದರು. ಅಂದು ಮಾರ್ಕಸ್ ಟ್ರೆಸ್ಕೋಥಿಕ್ ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ ಸ್ಪಿನ್ ದಿಗ್ಗಜ ಈ ಸಾಧನೆ ಮಾಡಿದ್ದರು.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದ ಬೌಲರ್ ಎನಿಸಿಕೊಂಡ ಸ್ಟುವರ್ಟ್ ಬ್ರಾಡ್ ಅವರು ಇಯಾನ್ ಬೋಥಮ್ ದಾಖಲೆಯನ್ನು ಮುರಿದಿದ್ದಾರೆ. ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡುವ ಮೂಲಕ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಗಳಲ್ಲಿ ಬ್ರಾಡ್ 149ನೇ ವಿಕೆಟ್ ಅನ್ನು ಪೂರ್ಣಗೊಳಿಸಿದ್ದಾರೆ.
ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಅವರು ಜೊತೆಯಾಗಿ ಆಡಿದ 133 ಟೆಸ್ಟ್ ಪಂದ್ಯಗಳಿಂದ 1000 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಇಬ್ಬರ ಜೋಡಿಯಿಂದ ಇಂಗ್ಲೆಂಡ್ ತಂಡ ಹಲವು ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಇಬ್ಬರೂ ಅತ್ಯಂತ ಯಶಸ್ವಿ ಜೋಡಿಯಾಗಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…