ಕ್ರೀಡೆ

ಇಂದಿನಿಂದ ಆ್ಯಶಸ್‌ ಟೆಸ್ಟ್‌: ಇಂಗ್ಲೆಂಡ್‌-ಆಸ್ಟ್ರೇಲಿಯಾ ಕಾದಾಟ

ಎಜ್‌ಬಾಸ್ಟನ್‌: ಬಹುನಿರೀಕ್ಷಿತ 2023ರ ಆ್ಯಶಸ್‌ ಸರಣಿ ಜೂ. 16ರಿಂದ ಆರಂಭವಾಗಲಿದ್ದು ಇಂಗ್ಲೆಂಡ್‌ ತಂಡವು ಎಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡವನ್ನು ಎದುರಿಸಲಿದೆ. ವಿಶ್ವದ ಬಲಿಷ್ಠ ತಂಡಗಳಾಗಿರುವ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯ ತಂಡದ ಆಟಗಾರರು ಮುಂದಿನ ಒಂದೂವರೆ ತಿಂಗಳು ಭರ್ಜರಿ ಆಟದ ಪ್ರದರ್ಶನ ನೀಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

ಡಬ್ಲ್ಯುಟಿಸಿ ಫೈನಲ್‌ನಲ್ಲಿ ಭಾರತವನ್ನು 209 ರನ್ನುಗಳಿಂದ ಸೋಲಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಪ್ರಶಸ್ತಿ ಗೆದ್ದಿರುವ ಆಸ್ಟ್ರೇಲಿಯ ತಂಡವು ಆ್ಯಶಸ್‌ ಸರಣಿಯಲ್ಲೂ ಅದ್ಭುತ ಪ್ರದರ್ಶನ ನೀಡಲು ಉತ್ಸುಕವಾಗಿದೆ. 2017ರ ಬಳಿಕ ಆ್ಯಶಸ್‌ ಸರಣಿಯನ್ನು ಉಳಿಸಿಕೊಂಡಿರುವ ಆಸ್ಟ್ರೇಲಿಯ ತಂಡವು ಉತ್ತಮ ಫಾರ್ಮ್ನಲ್ಲಿದೆ.

ಇದೇ ವೇಳೆ ಇಂಗ್ಲೆಂಡ್‌ ತಂಡವು ಕಳೆದೊಂದು ವರ್ಷದಿಂದ ಆಕ್ರಮಣಕಾರಿ ಆಟದ ಪ್ರದರ್ಶನ ನೀಡುತ್ತ ಬಂದಿದೆ. ಹೊಸ ನಾಯಕ ಬೆನ್‌ ಸ್ಟೋಕ್ಸ್‌ ಮತ್ತು ಮುಖ್ಯ ಕೋಚ್‌ ಬ್ರೆಂಡನ್‌ ಮೆಕಲಮ್‌ ಅವರ ಮಾರ್ಗದರ್ಶನದಲ್ಲಿ ತಂಡ ಉತ್ತಮ ಸಾಧನೆಗೈಯಲು ಹಾತೊರೆಯುತ್ತಿದೆ. 2022ರ ಜೂನ್‌ ಬಳಿಕ ತಂಡ ಯಾವುದೇ ಸರಣಿಯನ್ನು ಕಳೆದುಕೊಂಡಿಲ್ಲ. ಕಳೆದ 13 ಟೆಸ್ಟ್‌ ಪಂದ್ಯಗಳಲ್ಲಿ 11ರಲ್ಲಿ ಇಂಗ್ಲೆಂಡ್‌ ಜಯ ಸಾಧಿಸಿದ ಸಾಧನೆ ಮಾಡಿದೆ.

ಇಂಗ್ಲೆಂಡ್‌ ತಂಡವು ಈಗಾಗಲೇ ಆಟವಾಡುವ ತಂಡವನ್ನು ಪ್ರಕಟಿಸಿದ್ದು ಜೇಮ್ಸ್‌ ಆ್ಯಂಡರ್ಸನ್‌ ತಂಡಕ್ಕೆ ಮರಳಿದ್ದಾರೆ. ಒಲಿ ರಾಬಿನ್ಸನ್‌ ಮತ್ತು ಮೊಯಿನ್‌ ಅಲಿ ಅವರನ್ನು ಕೂಡ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆಸ್ಟ್ರೇಲಿಯ ತಂಡವು ಡಬ್ಲ್ಯುಟಿಸಿ ಫೈನಲ್‌ನಲ್ಲಿ ಆಡಿದ ಬಳಕವನ್ನೇ ಉಳಿಸಿಕೊಳ್ಳುವ ನಿರೀಕ್ಷೆಯಿದೆ.

ಎಜ್‌ಬಾಸ್ಟನ್‌ನಲ್ಲಿ ಒಟ್ಟಾರೆ 56 ಪಂದ್ಯಗಳು ನಡೆದಿವೆ. ಮೊದಲು ಬೌಲಿಂಗ್‌ ಮಾಡಿದ ತಂಡಗಳು 21 ಪಂದ್ಯಗಳಲ್ಲಿ ಗೆದ್ದಿವೆ. ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 306 ಆಗಿದೆ. ಟೆಸ್ಟ್‌ನ ಮೂರನೇ ಮತ್ತು ಐದನೇ ದಿನ ಮಳೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

andolanait

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

2 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

3 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

4 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

4 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

5 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

5 hours ago