ಕ್ರೀಡೆ

ಇಂದಿನಿಂದ ಆ್ಯಶಸ್‌ ಟೆಸ್ಟ್‌: ಇಂಗ್ಲೆಂಡ್‌-ಆಸ್ಟ್ರೇಲಿಯಾ ಕಾದಾಟ

ಎಜ್‌ಬಾಸ್ಟನ್‌: ಬಹುನಿರೀಕ್ಷಿತ 2023ರ ಆ್ಯಶಸ್‌ ಸರಣಿ ಜೂ. 16ರಿಂದ ಆರಂಭವಾಗಲಿದ್ದು ಇಂಗ್ಲೆಂಡ್‌ ತಂಡವು ಎಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡವನ್ನು ಎದುರಿಸಲಿದೆ. ವಿಶ್ವದ ಬಲಿಷ್ಠ ತಂಡಗಳಾಗಿರುವ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯ ತಂಡದ ಆಟಗಾರರು ಮುಂದಿನ ಒಂದೂವರೆ ತಿಂಗಳು ಭರ್ಜರಿ ಆಟದ ಪ್ರದರ್ಶನ ನೀಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

ಡಬ್ಲ್ಯುಟಿಸಿ ಫೈನಲ್‌ನಲ್ಲಿ ಭಾರತವನ್ನು 209 ರನ್ನುಗಳಿಂದ ಸೋಲಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಪ್ರಶಸ್ತಿ ಗೆದ್ದಿರುವ ಆಸ್ಟ್ರೇಲಿಯ ತಂಡವು ಆ್ಯಶಸ್‌ ಸರಣಿಯಲ್ಲೂ ಅದ್ಭುತ ಪ್ರದರ್ಶನ ನೀಡಲು ಉತ್ಸುಕವಾಗಿದೆ. 2017ರ ಬಳಿಕ ಆ್ಯಶಸ್‌ ಸರಣಿಯನ್ನು ಉಳಿಸಿಕೊಂಡಿರುವ ಆಸ್ಟ್ರೇಲಿಯ ತಂಡವು ಉತ್ತಮ ಫಾರ್ಮ್ನಲ್ಲಿದೆ.

ಇದೇ ವೇಳೆ ಇಂಗ್ಲೆಂಡ್‌ ತಂಡವು ಕಳೆದೊಂದು ವರ್ಷದಿಂದ ಆಕ್ರಮಣಕಾರಿ ಆಟದ ಪ್ರದರ್ಶನ ನೀಡುತ್ತ ಬಂದಿದೆ. ಹೊಸ ನಾಯಕ ಬೆನ್‌ ಸ್ಟೋಕ್ಸ್‌ ಮತ್ತು ಮುಖ್ಯ ಕೋಚ್‌ ಬ್ರೆಂಡನ್‌ ಮೆಕಲಮ್‌ ಅವರ ಮಾರ್ಗದರ್ಶನದಲ್ಲಿ ತಂಡ ಉತ್ತಮ ಸಾಧನೆಗೈಯಲು ಹಾತೊರೆಯುತ್ತಿದೆ. 2022ರ ಜೂನ್‌ ಬಳಿಕ ತಂಡ ಯಾವುದೇ ಸರಣಿಯನ್ನು ಕಳೆದುಕೊಂಡಿಲ್ಲ. ಕಳೆದ 13 ಟೆಸ್ಟ್‌ ಪಂದ್ಯಗಳಲ್ಲಿ 11ರಲ್ಲಿ ಇಂಗ್ಲೆಂಡ್‌ ಜಯ ಸಾಧಿಸಿದ ಸಾಧನೆ ಮಾಡಿದೆ.

ಇಂಗ್ಲೆಂಡ್‌ ತಂಡವು ಈಗಾಗಲೇ ಆಟವಾಡುವ ತಂಡವನ್ನು ಪ್ರಕಟಿಸಿದ್ದು ಜೇಮ್ಸ್‌ ಆ್ಯಂಡರ್ಸನ್‌ ತಂಡಕ್ಕೆ ಮರಳಿದ್ದಾರೆ. ಒಲಿ ರಾಬಿನ್ಸನ್‌ ಮತ್ತು ಮೊಯಿನ್‌ ಅಲಿ ಅವರನ್ನು ಕೂಡ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆಸ್ಟ್ರೇಲಿಯ ತಂಡವು ಡಬ್ಲ್ಯುಟಿಸಿ ಫೈನಲ್‌ನಲ್ಲಿ ಆಡಿದ ಬಳಕವನ್ನೇ ಉಳಿಸಿಕೊಳ್ಳುವ ನಿರೀಕ್ಷೆಯಿದೆ.

ಎಜ್‌ಬಾಸ್ಟನ್‌ನಲ್ಲಿ ಒಟ್ಟಾರೆ 56 ಪಂದ್ಯಗಳು ನಡೆದಿವೆ. ಮೊದಲು ಬೌಲಿಂಗ್‌ ಮಾಡಿದ ತಂಡಗಳು 21 ಪಂದ್ಯಗಳಲ್ಲಿ ಗೆದ್ದಿವೆ. ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 306 ಆಗಿದೆ. ಟೆಸ್ಟ್‌ನ ಮೂರನೇ ಮತ್ತು ಐದನೇ ದಿನ ಮಳೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

andolanait

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

6 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

9 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

9 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

9 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

9 hours ago