ಕ್ರೀಡೆ

ಇಂದಿನಿಂದ ಆ್ಯಶಸ್‌ ಟೆಸ್ಟ್‌: ಇಂಗ್ಲೆಂಡ್‌-ಆಸ್ಟ್ರೇಲಿಯಾ ಕಾದಾಟ

ಎಜ್‌ಬಾಸ್ಟನ್‌: ಬಹುನಿರೀಕ್ಷಿತ 2023ರ ಆ್ಯಶಸ್‌ ಸರಣಿ ಜೂ. 16ರಿಂದ ಆರಂಭವಾಗಲಿದ್ದು ಇಂಗ್ಲೆಂಡ್‌ ತಂಡವು ಎಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡವನ್ನು ಎದುರಿಸಲಿದೆ. ವಿಶ್ವದ ಬಲಿಷ್ಠ ತಂಡಗಳಾಗಿರುವ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯ ತಂಡದ ಆಟಗಾರರು ಮುಂದಿನ ಒಂದೂವರೆ ತಿಂಗಳು ಭರ್ಜರಿ ಆಟದ ಪ್ರದರ್ಶನ ನೀಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ.

ಡಬ್ಲ್ಯುಟಿಸಿ ಫೈನಲ್‌ನಲ್ಲಿ ಭಾರತವನ್ನು 209 ರನ್ನುಗಳಿಂದ ಸೋಲಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ ಪ್ರಶಸ್ತಿ ಗೆದ್ದಿರುವ ಆಸ್ಟ್ರೇಲಿಯ ತಂಡವು ಆ್ಯಶಸ್‌ ಸರಣಿಯಲ್ಲೂ ಅದ್ಭುತ ಪ್ರದರ್ಶನ ನೀಡಲು ಉತ್ಸುಕವಾಗಿದೆ. 2017ರ ಬಳಿಕ ಆ್ಯಶಸ್‌ ಸರಣಿಯನ್ನು ಉಳಿಸಿಕೊಂಡಿರುವ ಆಸ್ಟ್ರೇಲಿಯ ತಂಡವು ಉತ್ತಮ ಫಾರ್ಮ್ನಲ್ಲಿದೆ.

ಇದೇ ವೇಳೆ ಇಂಗ್ಲೆಂಡ್‌ ತಂಡವು ಕಳೆದೊಂದು ವರ್ಷದಿಂದ ಆಕ್ರಮಣಕಾರಿ ಆಟದ ಪ್ರದರ್ಶನ ನೀಡುತ್ತ ಬಂದಿದೆ. ಹೊಸ ನಾಯಕ ಬೆನ್‌ ಸ್ಟೋಕ್ಸ್‌ ಮತ್ತು ಮುಖ್ಯ ಕೋಚ್‌ ಬ್ರೆಂಡನ್‌ ಮೆಕಲಮ್‌ ಅವರ ಮಾರ್ಗದರ್ಶನದಲ್ಲಿ ತಂಡ ಉತ್ತಮ ಸಾಧನೆಗೈಯಲು ಹಾತೊರೆಯುತ್ತಿದೆ. 2022ರ ಜೂನ್‌ ಬಳಿಕ ತಂಡ ಯಾವುದೇ ಸರಣಿಯನ್ನು ಕಳೆದುಕೊಂಡಿಲ್ಲ. ಕಳೆದ 13 ಟೆಸ್ಟ್‌ ಪಂದ್ಯಗಳಲ್ಲಿ 11ರಲ್ಲಿ ಇಂಗ್ಲೆಂಡ್‌ ಜಯ ಸಾಧಿಸಿದ ಸಾಧನೆ ಮಾಡಿದೆ.

ಇಂಗ್ಲೆಂಡ್‌ ತಂಡವು ಈಗಾಗಲೇ ಆಟವಾಡುವ ತಂಡವನ್ನು ಪ್ರಕಟಿಸಿದ್ದು ಜೇಮ್ಸ್‌ ಆ್ಯಂಡರ್ಸನ್‌ ತಂಡಕ್ಕೆ ಮರಳಿದ್ದಾರೆ. ಒಲಿ ರಾಬಿನ್ಸನ್‌ ಮತ್ತು ಮೊಯಿನ್‌ ಅಲಿ ಅವರನ್ನು ಕೂಡ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆಸ್ಟ್ರೇಲಿಯ ತಂಡವು ಡಬ್ಲ್ಯುಟಿಸಿ ಫೈನಲ್‌ನಲ್ಲಿ ಆಡಿದ ಬಳಕವನ್ನೇ ಉಳಿಸಿಕೊಳ್ಳುವ ನಿರೀಕ್ಷೆಯಿದೆ.

ಎಜ್‌ಬಾಸ್ಟನ್‌ನಲ್ಲಿ ಒಟ್ಟಾರೆ 56 ಪಂದ್ಯಗಳು ನಡೆದಿವೆ. ಮೊದಲು ಬೌಲಿಂಗ್‌ ಮಾಡಿದ ತಂಡಗಳು 21 ಪಂದ್ಯಗಳಲ್ಲಿ ಗೆದ್ದಿವೆ. ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 306 ಆಗಿದೆ. ಟೆಸ್ಟ್‌ನ ಮೂರನೇ ಮತ್ತು ಐದನೇ ದಿನ ಮಳೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

andolanait

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 hour ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

2 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

2 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

7 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

7 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

8 hours ago