ಕ್ರೀಡೆ

ಏಷ್ಯಾಕಪ್‌ 2023 : ಶ್ರೀಲಂಕಾ ಮಣಿಸಿ 8ನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದ ಭಾರತ

ಕೊಲಂಬೊ : ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ ಇದೀಗ 8ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಇದು ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್‌ ಚಾಂಪಿಯನ್‌ ಪಟ್ಟವಾಗಿದೆ. ಇನ್ನೂ 6 ಬಾರಿ ಚಾಂಪಿಯನ್‌ ಹಾಗೂ 6 ಬಾರಿ ರನ್ನರ್‌ ಅಪ್‌ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಲಂಕಾ ಕೇವಲ 6 ಓವರ್‌ಗಳಲ್ಲಿ 13 ರನ್‌ಗಳಿಗೆ ಪ್ರಮುಖ 6 ವಿಕೆಟ್‌ ಗಳನ್ನ ಕಳೆದುಕೊಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಪತುಮ್ ನಿಸ್ಸಂಕ (2 ರನ್‌), ಕುಶಲ್‌ ಮೆಂಡಿಸ್‌ (17 ರನ್), ಧನಂಜಯ ಡಿ ಸಿಲ್ವಾ (4 ರನ್‌), ದುನಿತ್ ವೆಲ್ಲಾಳ (8 ರನ್‌) ಗಳಿಸಿದ್ರೆ ಕುಶಲ್ ಪೆರೇರ, ಸಾದೀರ ಸಮರವಿಕ್ರಮ, ಚರಿತ್ ಅಸಲಂಕ, ನಾಯಕ ದಸುನ್‌ ಶನಾಕ (Dasun Shanaka) ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿಕೊಂಡರು. ಕೊನೆಯಲ್ಲಿ ಪ್ರಮೋದ್‌ ಮಧೂಶನ್‌ 1 ರನ್‌ ಗಳಿಸಿದ್ರೆ, ಮತೀಶ ಪಥಿರಣ ಶೂನ್ಯಕ್ಕೆ ಔಟಾದರು. ದುಶನ್ ಹೇಮಂತ 13 ರನ್‌ಗಳಿಸಿ ಕ್ರೀ‌ಸ್‌ನಲ್ಲಿ ಉಳಿದರು.

ಲಂಕಾ ವಿರುದ್ಧ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮೊಹಮ್ಮದ್‌ ಸಿರಾಜ್‌, 7 ಓವರ್‌ಗಳಲ್ಲಿ 21 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಕಿತ್ತರೆ, ಹಾರ್ದಿಕ್‌ ಪಾಂಡ್ಯ 2.2 ಓವರ್‌ಗಳಲ್ಲಿ 3 ರನ್‌ ನೀಡಿ 3 ವಿಕೆಟ್‌ ಕಿತ್ತರು. ಜಸ್ಪ್ರೀತ್‌ ಬುಮ್ರಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

lokesh

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

1 hour ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

1 hour ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

1 hour ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

1 hour ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

1 hour ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

1 hour ago