ಕ್ರೀಡೆ

ಏಷ್ಯಾಕಪ್‌ 2023 : ಶ್ರೀಲಂಕಾ ಮಣಿಸಿ 8ನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದ ಭಾರತ

ಕೊಲಂಬೊ : ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 8ನೇ ಬಾರಿಗೆ ಏಷ್ಯಾಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. 1984, 1988, 1991, 1995, 2010, 2016, 2018ರಲ್ಲಿ ಏಷ್ಯಾಕಪ್‌ ಚಾಂಪಿಯನ್‌ ಆಗಿದ್ದ ಭಾರತ ಇದೀಗ 8ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಇದು ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಗೆದ್ದ 2ನೇ ಏಕದಿನ ಏಷ್ಯಾಕಪ್‌ ಚಾಂಪಿಯನ್‌ ಪಟ್ಟವಾಗಿದೆ. ಇನ್ನೂ 6 ಬಾರಿ ಚಾಂಪಿಯನ್‌ ಹಾಗೂ 6 ಬಾರಿ ರನ್ನರ್‌ ಅಪ್‌ ಪ್ರಶಸ್ತಿ ಗೆದ್ದುಕೊಂಡಿದ್ದ ಶ್ರೀಲಂಕಾ 7ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಉತ್ತಮ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಲಂಕಾ ಕೇವಲ 6 ಓವರ್‌ಗಳಲ್ಲಿ 13 ರನ್‌ಗಳಿಗೆ ಪ್ರಮುಖ 6 ವಿಕೆಟ್‌ ಗಳನ್ನ ಕಳೆದುಕೊಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಪತುಮ್ ನಿಸ್ಸಂಕ (2 ರನ್‌), ಕುಶಲ್‌ ಮೆಂಡಿಸ್‌ (17 ರನ್), ಧನಂಜಯ ಡಿ ಸಿಲ್ವಾ (4 ರನ್‌), ದುನಿತ್ ವೆಲ್ಲಾಳ (8 ರನ್‌) ಗಳಿಸಿದ್ರೆ ಕುಶಲ್ ಪೆರೇರ, ಸಾದೀರ ಸಮರವಿಕ್ರಮ, ಚರಿತ್ ಅಸಲಂಕ, ನಾಯಕ ದಸುನ್‌ ಶನಾಕ (Dasun Shanaka) ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿಕೊಂಡರು. ಕೊನೆಯಲ್ಲಿ ಪ್ರಮೋದ್‌ ಮಧೂಶನ್‌ 1 ರನ್‌ ಗಳಿಸಿದ್ರೆ, ಮತೀಶ ಪಥಿರಣ ಶೂನ್ಯಕ್ಕೆ ಔಟಾದರು. ದುಶನ್ ಹೇಮಂತ 13 ರನ್‌ಗಳಿಸಿ ಕ್ರೀ‌ಸ್‌ನಲ್ಲಿ ಉಳಿದರು.

ಲಂಕಾ ವಿರುದ್ಧ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮೊಹಮ್ಮದ್‌ ಸಿರಾಜ್‌, 7 ಓವರ್‌ಗಳಲ್ಲಿ 21 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಕಿತ್ತರೆ, ಹಾರ್ದಿಕ್‌ ಪಾಂಡ್ಯ 2.2 ಓವರ್‌ಗಳಲ್ಲಿ 3 ರನ್‌ ನೀಡಿ 3 ವಿಕೆಟ್‌ ಕಿತ್ತರು. ಜಸ್ಪ್ರೀತ್‌ ಬುಮ್ರಾ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

lokesh

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

4 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

6 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

15 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

15 hours ago